5:58 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

Indo- Pak | ಪಾಕ್ ವಶದಲ್ಲಿದ್ದ ಭಾರತೀಯ ಯೋಧ ಪಿ.ಕೆ. ಶಾ ಬಿಡುಗಡೆ: 21 ದಿನಗಳ ಬಳಿಕ ಸ್ವದೇಶಕ್ಕೆ ವಾಪಾಸ್ !

14/05/2025, 20:56

ವಾಘಾ(reporterkarnataka.com): ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಕಿಸ್ತಾನದ ತನ್ನ ವಶದಲ್ಲಿರುವ ಬಿಎಸ್ ಎಫ್ ಗೆ ಸೇರಿದ ಭಾರತೀಯ ಯೋಧ ಪಿ.ಕೆ. ಶಾ ಅವರನ್ನು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ ಶಾ ಅವರನ್ನು ಇಂದು ಬೆಳಗ್ಗೆ 10.30ಕ್ಕೆ ಭಾರತಕ್ಕೆ ಹಸ್ತಾಂತರ ಮಾಡಲಾಯಿತು. 21 ದಿನಗಳ ಹಿಂದೆ ಪಂಜಾಬ್​ನ ಫಿರೋಜ್​ಪುರ ಗಡಿಯಲ್ಲಿ ಪಾಕಿಸ್ತಾನ, ಭಾರತೀಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ವಶಕ್ಕೆ ಪಡೆದಿತ್ತು. ಕಳೆದ ಏಪ್ರಿಲ್ 23ರಂದು ಭೂ ಸೇನೆಯ 182ನೇ ಬೆಟಾಲಿಯನ್‌ ಯೋಧ ಪಿ.ಕೆ. ಶಾ ಅವರು ಆಕಸ್ಮಿಕವಾಗಿ ಭಾರತದ ಗಡಿಯನ್ನು ದಾಟಿ, ಪಾಕಿಸ್ತಾನದ ಗಡಿ ರೇಖೆಯನ್ನು ಪ್ರವೇಶ ಮಾಡಿದ್ದರು. ಗಡಿ ದಾಟಿದ್ದ ತಪ್ಪಿಗೆ ಪಿ.ಕೆ. ಶಾ ಅವರನ್ನು ಪಾಕಿಸ್ತಾನದ ರೇಂಜರ್ಸ್ ಬಂಧಿಸಿದ್ದರು. ಭಾರತ- ಪಾಕ್ ಸಂಘರ್ಷ ನಡೆದು ಕದನ ವಿರಾಮದ ಬಳಿಕ ಪಾಕಿಸ್ತಾನ ಭಾರತದ ಷರತ್ತುಗಳಿಗೆ ಒಪ್ಪಿಕೊಂಡಿದೆ. ಹೀಗಾಗಿ ಅಟ್ಟಾರಿ ವಾಘಾ ಗಡಿ ಮೂಲಕ ಯೋಧ ಪಿ.ಕೆ. ಶಾ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ. ಶಾ ಅವರನ್ನು ಪ್ರೋಟೋಕಾಲ್ ಪ್ರಕಾರ ಭಾರತೀಯ ಸೇನೆಗೆ ಹಸ್ತಾಂತರ ಮಾಡಲಾಗಿದೆ. 21 ದಿನಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದ ಪಿ.ಕೆ. ಶಾ ಅವರು ಸದ್ಯ ಸೇನಾ ಕಣ್ಗಾವಲಿನಲ್ಲಿದ್ದಾರೆ. ಭಾರತೀಯ ಯೋಧ ವೈರಿ ರಾಷ್ಟ್ರದಿಂದ ಸುರಕ್ಷಿತವಾಗಿ ಬಿಡುಗಡೆಯಾಗಿರೋದು ಹೆಮ್ಮೆಯ ವಿಚಾರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು