6:48 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Indo- Pak | ಪಾಕ್ ವಶದಲ್ಲಿದ್ದ ಭಾರತೀಯ ಯೋಧ ಪಿ.ಕೆ. ಶಾ ಬಿಡುಗಡೆ: 21 ದಿನಗಳ ಬಳಿಕ ಸ್ವದೇಶಕ್ಕೆ ವಾಪಾಸ್ !

14/05/2025, 20:56

ವಾಘಾ(reporterkarnataka.com): ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಕಿಸ್ತಾನದ ತನ್ನ ವಶದಲ್ಲಿರುವ ಬಿಎಸ್ ಎಫ್ ಗೆ ಸೇರಿದ ಭಾರತೀಯ ಯೋಧ ಪಿ.ಕೆ. ಶಾ ಅವರನ್ನು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ ಶಾ ಅವರನ್ನು ಇಂದು ಬೆಳಗ್ಗೆ 10.30ಕ್ಕೆ ಭಾರತಕ್ಕೆ ಹಸ್ತಾಂತರ ಮಾಡಲಾಯಿತು. 21 ದಿನಗಳ ಹಿಂದೆ ಪಂಜಾಬ್​ನ ಫಿರೋಜ್​ಪುರ ಗಡಿಯಲ್ಲಿ ಪಾಕಿಸ್ತಾನ, ಭಾರತೀಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ವಶಕ್ಕೆ ಪಡೆದಿತ್ತು. ಕಳೆದ ಏಪ್ರಿಲ್ 23ರಂದು ಭೂ ಸೇನೆಯ 182ನೇ ಬೆಟಾಲಿಯನ್‌ ಯೋಧ ಪಿ.ಕೆ. ಶಾ ಅವರು ಆಕಸ್ಮಿಕವಾಗಿ ಭಾರತದ ಗಡಿಯನ್ನು ದಾಟಿ, ಪಾಕಿಸ್ತಾನದ ಗಡಿ ರೇಖೆಯನ್ನು ಪ್ರವೇಶ ಮಾಡಿದ್ದರು. ಗಡಿ ದಾಟಿದ್ದ ತಪ್ಪಿಗೆ ಪಿ.ಕೆ. ಶಾ ಅವರನ್ನು ಪಾಕಿಸ್ತಾನದ ರೇಂಜರ್ಸ್ ಬಂಧಿಸಿದ್ದರು. ಭಾರತ- ಪಾಕ್ ಸಂಘರ್ಷ ನಡೆದು ಕದನ ವಿರಾಮದ ಬಳಿಕ ಪಾಕಿಸ್ತಾನ ಭಾರತದ ಷರತ್ತುಗಳಿಗೆ ಒಪ್ಪಿಕೊಂಡಿದೆ. ಹೀಗಾಗಿ ಅಟ್ಟಾರಿ ವಾಘಾ ಗಡಿ ಮೂಲಕ ಯೋಧ ಪಿ.ಕೆ. ಶಾ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ. ಶಾ ಅವರನ್ನು ಪ್ರೋಟೋಕಾಲ್ ಪ್ರಕಾರ ಭಾರತೀಯ ಸೇನೆಗೆ ಹಸ್ತಾಂತರ ಮಾಡಲಾಗಿದೆ. 21 ದಿನಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದ ಪಿ.ಕೆ. ಶಾ ಅವರು ಸದ್ಯ ಸೇನಾ ಕಣ್ಗಾವಲಿನಲ್ಲಿದ್ದಾರೆ. ಭಾರತೀಯ ಯೋಧ ವೈರಿ ರಾಷ್ಟ್ರದಿಂದ ಸುರಕ್ಷಿತವಾಗಿ ಬಿಡುಗಡೆಯಾಗಿರೋದು ಹೆಮ್ಮೆಯ ವಿಚಾರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು