7:32 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ

14/05/2025, 23:30

ನವದೆಹಲಿ(reporterkarnataka.com): ಸಂವಿಧಾನದ ಹತ್ತನೇ ಅನುಸೂಚಿಯಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ ಗಳಿದ್ದು, ಕರ್ನಾಟಕ ಮತ್ತು ಅದರಲ್ಲೂ ಮಂಗಳೂರು (ಉಳ್ಳಾಲ) ಕ್ಷೇತ್ರದ ಜನತೆಗೆ ಇದೊಂದು ಹೆಮ್ಮೆ ಮತ್ತು ಸಂತೋಷದ ಸುದ್ದಿಯಾಗಿದೆ.
ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆಗೆ ಚುರುಕು ಮುಟ್ಟಿಸಿ ಅಮೂಲಾಗ್ರ ಬದಲಾವಣೆ ತಂದಿರುವ ಯು.ಟಿ.ಖಾದರ್ ಅವರಿಗೆ ಈ ಸ್ಥಾನ ಅರ್ಹವಾಗಿಯೇ ಸಂದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು