5:32 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ

14/05/2025, 23:30

ನವದೆಹಲಿ(reporterkarnataka.com): ಸಂವಿಧಾನದ ಹತ್ತನೇ ಅನುಸೂಚಿಯಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ ಗಳಿದ್ದು, ಕರ್ನಾಟಕ ಮತ್ತು ಅದರಲ್ಲೂ ಮಂಗಳೂರು (ಉಳ್ಳಾಲ) ಕ್ಷೇತ್ರದ ಜನತೆಗೆ ಇದೊಂದು ಹೆಮ್ಮೆ ಮತ್ತು ಸಂತೋಷದ ಸುದ್ದಿಯಾಗಿದೆ.
ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆಗೆ ಚುರುಕು ಮುಟ್ಟಿಸಿ ಅಮೂಲಾಗ್ರ ಬದಲಾವಣೆ ತಂದಿರುವ ಯು.ಟಿ.ಖಾದರ್ ಅವರಿಗೆ ಈ ಸ್ಥಾನ ಅರ್ಹವಾಗಿಯೇ ಸಂದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು