5:58 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಮಸ್ಕಿ ಪ್ರಗತಿ ಪರಿಶೀಲಿನಾ ಸಭೆ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ಶಾಸಕ ಬಸನಗೌಡ ತೂರುವಿಹಾಳ

15/05/2025, 00:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕು ವಾಲ್ಮೀಕಿ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಸ್ಕಿ ಶಾಸಕ ಬಸನಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೃಷಿ ಸಹಾಯ ನಿರ್ದೇಶಕರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು. ಕೃಷಿ ಹೊಂಡ ಸೌಲಭ್ಯ ನೀಡುವ ಯೋಜನೆಗೆ 32 ಫಲಾನುಭವಿಗಳನ್ನು ತಾನೇ ಆಯ್ಕೆ ಮಾಡಿದ್ದಕ್ಕೆ ಶಾಸಕರು ಕೆಂಡ ಮಂಡಲವಾದರು.ಎಲ್ಲ ನೀನು ಆಯ್ಕೆ ಮಾಡುವುದಾದರೆ, ನಮ್ಮದೇನು ಕೆಲಸ? ಎಷ್ಟು ಫ್ರಾಡ್ ಮಾಡಿದ್ದೀರಿ? 5 ಕೋಟಿ ಕಾಮಗಾರಿ ಮಾಹಿತಿ ನನಗೆ ನೀಡಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗೆ ಏ ಕತ್ತಿ ಕಾಯೋನು ಸರಿಯಾದ ಮಾಹಿತಿ ನನಗೆ ಕೊಡಿ. ಪ್ಯಾಂಟು ಶರ್ಟ್ ಹಾಕಿಕೊಂಡು ನೀಟಾಗಿ ಸರ್ಕಾರದ ಗೌರವ ತೆಗೆದುಕೊಂಡು ಆರಾಮ್ ಇದ್ದುಬಿಡು ಫಲಾನುಭವಿಗಳು ಹಾಳಾಗಿ ಹೋಗಲಿ. ಕಾರ್ಯನಿರ್ವಾಹಕ ಅಧಿಕಾರಿಗಳು ನಮಗೂ ಮಾಹಿತಿ ನೀಡದೆ ನಿನಗೆ ಆಯ್ಕೆ ಮಾಡಲು ಪವರ್ ಕೊಟ್ಟವರು ಯಾರು ಎಂದು ಅಧಿಕಾರಿಗಳ ಚಳಿ ಬಿಡಿಸಿದರು.
ಸರಿಯಾದ ರೀತಿಯಲ್ಲಿ ಕೆಲಸ ಮಾಡಿ. ಕುಡಿಯುವ ನೀರಿನ ಯೋಜನೆಯಲ್ಲಿ ಬಹಳ ಭ್ರಷ್ಟಾಚಾರ ಹೇಳಿ ಬರುತ್ತದೆ. ಕೆಲಸ ಕಾರ್ಯ ಆಗದೆ ಯಾವುದೇ ಬಿಲ್ ಮಾಡಬಾರದು ಎಂದು ಶಾಸಕರು ಎಚ್ಚರಿಸಿದರು.


ಮುಂದಿನ ಸಭೆಯಲ್ಲಿ ಮಾಹಿತಿ ನೀಡದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು..
ಎಲ್ಲಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರೆ ಕೆಲವೊಂದು ಅಧಿಕಾರಿಗಳು ಗೈರಾಗಿದ್ದರು. ಕಾರ್ಯನಿರ್ವಾಹಕ ಅಧಿಕಾರಿಗಳು ನಮಗೆ ಹೇಳಲಾರದೆ ಅಸಿಸ್ಟೆಂಟ್ ಅಧಿಕಾರಿಗಳನ್ನು ಕಳಿಸಿದರೆ ಅವರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು