7:32 PM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ

15/05/2025, 11:32

ಮಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆಯಲ್ಲಿ ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರಿನ ಬಿಜೈನಲ್ಲಿರುವ ಮಂಜುನಾಥ್ ಅವರ ಮನೆ ಮೇಲೆ ಲೋಕಾಯುಕ್ತ ಎಸ್ ಪಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಮನೆಯಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.
ಒಟ್ಟು 3 ಕಾರುಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಆಗಮಿಸಿದ್ದರು.
ಮಂಗಳೂರಿನ ಬಿಜೈ ನ 8ನೇ ಕ್ರಾಸ್ ನಲ್ಲಿ ಮಂಜುನಾಥ್ ಅವರ ಮನೆ ಇದೆ. ಮೂರು ಅಂತಸ್ತಿನ ಮನೆಯಲ್ಲಿ ಮಂಜುನಾಥ್ ಕುಟುಂಬ ವಾಸವಾಗಿದೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ತುಮಕೂರು ಮೂಲದವರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು