4:14 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಿಗೆ ದಾಳಿ

15/05/2025, 13:41

ಬೆಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದ ಮೇಲೆ ರಾಜ್ಯದ ಬೆಂಗಳೂರು, ಮಂಗಳೂರು ಸಹಿತ 7 ನಗರಗಳ 40ಕ್ಕೂ ಹೆಚ್ಚು ಕಡೆಗಳಲ್ಲಿ ಸರಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.


ಸುಮಾರು 150ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 7 ನಗರಗಳಲ್ಲಿ ದಾಳಿ ನಡೆದಿದೆ. ಬೆಂಗಳೂರು, ಮಂಗಳೂರು,ತುಮಕೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ,ಯಾದಗಿರಿಯ ಶಹಾಪುರದಲ್ಲಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಬೆಂಗಳೂರಿನ 12 ಕಡೆಗಳಲ್ಲಿ ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ವಿಜಯಪುರ 4,ಮಂಗಳೂರಿನ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು
ದಾಳಿ ಮಾಡಿದ್ದಾರೆ. ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರಿನಲ್ಲಿ ನಿರ್ಮಿತಿ ಕೇಂದ್ರದ‌ ನಿರ್ದೇಶಕ ರಾಜಶೇಖರ್, ಮಂಗಳೂರಿನಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್, ‌ ವಿಜಯಪುರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ರೇಣುಕಾ. ಸಾತರ್ಲೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕರ ಮುರಳಿ ಟಿವಿ, ಬೆಂಗಳೂರು ಕಾನೂನು ಮಾಪನಶಾಸ್ತ್ರದ ಇನ್ಸ್‌ಪೆಕ್ಟರ್ ಎಚ್.ಆರ್ ನಟರಾಜ್ , ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕು ಕಚೇರಿಯ ಎಸ್ ಡಿಎ ಅನಂತ್ ಕುಮಾರ್, ಯಾದಗಿರಿ ಶಹಾಪುರ ತಾಲೂಕಿನ ಉಮಾಕಾಂತ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಸಂಪತ್ತು ಆರೋಪದ ಮೇಲೆ ದಾಳಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು