7:29 PM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯಾಚರಣೆ

15/05/2025, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮರ ಕಡಿಯುವ ಸಂದರ್ಭದಲ್ಲಿ ಕೊಂಬೆ ಮುರಿದು ಎರಡು ಕೊಂಬೆಗಳ ಮಧ್ಯೆ ಅಪಾಯಕಾರಿ ಸ್ಥಿತಿಯಲ್ಲಿ
ಸಿಲುಕಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.


ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ದೇವಸ್ಥಾನಕ್ಕೆ ಸಂಬಂಧಿಸಿದ ಹುಣಸೇ ಮರವನ್ನು ಕಡಿಯುವ ಸಂದರ್ಭ ಭಯಾನಕ ಘಟನೆ ಸಂಭವಿಸಿದೆ. ಮರದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ಸಯ್ಯದ್ ಎಂಬ ವ್ಯಕ್ತಿ, ಮರದ ಎರಡು ಕೊಂಬೆಗಳ ಮಧ್ಯೆ ಏಕಾಏಕಿ ಮುರಿದು ಬಿದ್ದ ಕೊಂಬೆಯಲ್ಲಿ ಸಿಲುಕಿಕೊಂಡಿದ್ದರು.
ಮರದ ತುದಿಯಲ್ಲಿ ಸಿಲುಕಿಕೊಂಡು ತಾಸಿಗೂ ಹೆಚ್ಚು ಹೊತ್ತು ನರಳಾಡುತ್ತಿದ್ದರು. ನಂತರ ಅಗ್ನಿಶಾಮಕ ದಳದ ನೆರವಿನಿಂದ ರಕ್ಷಣಾ ಕಾರ್ಯ ನಡೆಯಿತು. ಸಯ್ಯದ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲು ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಡೂರು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು