9:31 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಉಳ್ಳಾಲ ದರ್ಗಾದ 22ನೇ ಪಂಚ ವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಸಿಎಂ

16/05/2025, 22:30

ಮಂಗಳೂರು(reporterkarnataka.com): ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಮಾತನಾಡಿದರು.
ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌ ಎಂದರು.
ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದು ಅವರು ನುಡಿದರು.
ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ ಎಂದರು.
ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದು ಸಿಎಂ ನುಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ದಗಾ೯ ಭೇಟಿ ನೀಡಿದರು.
ಸ್ಪೀಕರ್ ಯು.ಟಿ. ಖಾದರ್,
ಉಳ್ಳಾಲ ಖಾಝಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಮಾತನಾಡಿದರು.
ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬಿ. ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ದಗಾ೯ ಅಧ್ಯಕ್ಷ ಹನೀಫ್ ಹಾಜಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು