2:16 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಉಳ್ಳಾಲ ದರ್ಗಾದ 22ನೇ ಪಂಚ ವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಸಿಎಂ

16/05/2025, 22:30

ಮಂಗಳೂರು(reporterkarnataka.com): ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಮಾತನಾಡಿದರು.
ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌ ಎಂದರು.
ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದು ಅವರು ನುಡಿದರು.
ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ ಎಂದರು.
ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದು ಸಿಎಂ ನುಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ದಗಾ೯ ಭೇಟಿ ನೀಡಿದರು.
ಸ್ಪೀಕರ್ ಯು.ಟಿ. ಖಾದರ್,
ಉಳ್ಳಾಲ ಖಾಝಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಮಾತನಾಡಿದರು.
ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬಿ. ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ದಗಾ೯ ಅಧ್ಯಕ್ಷ ಹನೀಫ್ ಹಾಜಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು