7:08 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಮಸ್ಕಿ: ಗಚ್ಚಿನ ಮಠದಲ್ಲಿ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ

17/05/2025, 00:44

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ

info.reporterkarnataka@gmail.com

ಪ್ರಕೃತಿ ಫೌಂಡೇಶನ್ ಹಾಗೂ ಜಗದ್ಗುರು ರೇಣುಕಾಚಾರ್ಯ ಯುವ ಘಟಕ ವತಿಯಿಂದ ಕುಟುಂಬ ದಿನಾಚರಣೆ ಪ್ರಯುಕ್ತ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ ನಡೆಯಿತು.
ಗಚ್ಚಿನ ಮಠದಲ್ಲಿ ಮರಗಳಿಗೆ ಮಣ್ಣಿನ ಮಡಕೆ ಕಟ್ಟಿ, ಮಡಕೆಯಲ್ಲಿ ನೀರು, ಕಾಳು, ಅಕ್ಕಿಯನ್ನು ಹಾಕುವ ಮೂಲಕ ಪಕ್ಷಿಗಳಿಗೆ ದಾಹ, ಹಸಿವು ನೀಗಿಸುವ ಉತ್ತಮ ಕಾರ್ಯ ಎಂದು ಜಂಗಮ ಸಮಾಜದ ಯುವ ಘಟಕದ ಅಧ್ಯಕ್ಷ ಸಿದ್ದಯ್ಯ ಹೆಸರೂರು ಹಿರೇಮಠ ಹೇಳಿದರು.
ಪ್ರಕೃತಿ ಫೌಂಡೇಶನ್ ನ ಸಂಸ್ಥಾಪಕ ಅಧ್ಯಕ್ಷ, ಶಿವಮೂರ್ತಿ ಗದ್ಗಿಮಠ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ 5ನೇ ವರ್ಷದ ನಮ್ಮ ನಡೆ ಪ್ರಾಣಿ, ಪಕ್ಷಿಗಳ ರಕ್ಷಣೆ ಕಡೆ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ .
ಬಿರು ಬೇಸಿಗೆಯಲ್ಲಿ ಪ್ರಕೃತಿಯಲ್ಲಿ ಕುಡಿಯಲು ನೀರಿನ ತೀವ್ರ ಕೊರತೆಯಿಂದ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೀಡಾಗುತ್ತಿವೆ. ಹಾಗಾಗಿ ಸಾರ್ವಜನಿಕರು ಪ್ರಾಣಿ, ಪಕ್ಷಿಗಳಿಗಾಗಿ ತಮ್ಮ ತಮ್ಮ ಮನೆಯ ಮುಂದೆ ಹಾಗೂ ಮನೆಯ ಮೇಲೆ ನೀರು, ಕಾಳು ಇತರೆ ಧಾನ್ಯ ಅಥವಾ ಆಹಾರವನ್ನು ಇರಿಸಿ ಪ್ರಾಣಿ ಪಕ್ಷಿಗಳ ದಾಹ, ಹಸಿವು ನೀಗಿಸಿ ಮಾನವೀಯತೆ ಮೆರೆಯೋಣ. ಮೂಕ ಪ್ರಾಣಿ ಪಕ್ಷಿಗಳ ಸಂರಕ್ಷಣೆ ನಮ್ಮನಿಮ್ಮೆಲರ ಆದ್ಯ ಕರ್ತವ್ಯವಾಗಿದೆ ಎಂದರು.
ಪ್ರಸ್ತುತ ಮನುಷ್ಯ ಆಧುನಿಕ ನಾಗರಿಕತೆ ಅಪ್ಪಿಕೊಳ್ಳುತ್ತಿದ್ದು, ಸಂಬಂಧಗಳ ಮೌಲ್ಯ ಕಡಿಮೆಯಾಗುತ್ತಿದೆ. ಈಚೆಗೆ ಅವಿಭಕ್ತ ಕುಟುಂಬಗಳು ಮರೆಯಾಗು­ತ್ತಿರುವುದೂ ಅರಾಜಕತೆಯ ಸಮಾಜ ನಿರ್ಮಾಣಕ್ಕೆ ಕಾರಣವಾ­ಗುತ್ತಿದೆ ಎಂದು ಜಂಗಮ ಸೇವಾ ಸಮಿತಿ ಯುವ ಘಟಕದ ಕಾರ್ಯದರ್ಶಿ ಯಾದ ವೀರೇಶ ಕ್ಯಾತ್ನಟ್ಟಿ ಅವರು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ, ಜಂಗಮ ಸಮಾಜದ ಅಧ್ಯಕ್ಷ ಕರಿಬಸವಯ್ಯ ಸಿಂಧನೂರುಮಠ,ಶಿವಶಂಕರಯ್ಯ ಸ್ವಾಮಿ ಗಚ್ಚಿನಮಠ, ಮಲ್ಲಿಕಾರ್ಜುನ, ಗ್ಯಾನಪ್ಪ ಮೆದಿಕಿನಾಳ, ಮಾರುತಿ ಜಿನ್ನಾಪುರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು