7:07 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಸ್ಕಿ: ಗಚ್ಚಿನ ಮಠದಲ್ಲಿ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ

17/05/2025, 00:44

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ

info.reporterkarnataka@gmail.com

ಪ್ರಕೃತಿ ಫೌಂಡೇಶನ್ ಹಾಗೂ ಜಗದ್ಗುರು ರೇಣುಕಾಚಾರ್ಯ ಯುವ ಘಟಕ ವತಿಯಿಂದ ಕುಟುಂಬ ದಿನಾಚರಣೆ ಪ್ರಯುಕ್ತ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ ನಡೆಯಿತು.
ಗಚ್ಚಿನ ಮಠದಲ್ಲಿ ಮರಗಳಿಗೆ ಮಣ್ಣಿನ ಮಡಕೆ ಕಟ್ಟಿ, ಮಡಕೆಯಲ್ಲಿ ನೀರು, ಕಾಳು, ಅಕ್ಕಿಯನ್ನು ಹಾಕುವ ಮೂಲಕ ಪಕ್ಷಿಗಳಿಗೆ ದಾಹ, ಹಸಿವು ನೀಗಿಸುವ ಉತ್ತಮ ಕಾರ್ಯ ಎಂದು ಜಂಗಮ ಸಮಾಜದ ಯುವ ಘಟಕದ ಅಧ್ಯಕ್ಷ ಸಿದ್ದಯ್ಯ ಹೆಸರೂರು ಹಿರೇಮಠ ಹೇಳಿದರು.
ಪ್ರಕೃತಿ ಫೌಂಡೇಶನ್ ನ ಸಂಸ್ಥಾಪಕ ಅಧ್ಯಕ್ಷ, ಶಿವಮೂರ್ತಿ ಗದ್ಗಿಮಠ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ 5ನೇ ವರ್ಷದ ನಮ್ಮ ನಡೆ ಪ್ರಾಣಿ, ಪಕ್ಷಿಗಳ ರಕ್ಷಣೆ ಕಡೆ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ .
ಬಿರು ಬೇಸಿಗೆಯಲ್ಲಿ ಪ್ರಕೃತಿಯಲ್ಲಿ ಕುಡಿಯಲು ನೀರಿನ ತೀವ್ರ ಕೊರತೆಯಿಂದ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೀಡಾಗುತ್ತಿವೆ. ಹಾಗಾಗಿ ಸಾರ್ವಜನಿಕರು ಪ್ರಾಣಿ, ಪಕ್ಷಿಗಳಿಗಾಗಿ ತಮ್ಮ ತಮ್ಮ ಮನೆಯ ಮುಂದೆ ಹಾಗೂ ಮನೆಯ ಮೇಲೆ ನೀರು, ಕಾಳು ಇತರೆ ಧಾನ್ಯ ಅಥವಾ ಆಹಾರವನ್ನು ಇರಿಸಿ ಪ್ರಾಣಿ ಪಕ್ಷಿಗಳ ದಾಹ, ಹಸಿವು ನೀಗಿಸಿ ಮಾನವೀಯತೆ ಮೆರೆಯೋಣ. ಮೂಕ ಪ್ರಾಣಿ ಪಕ್ಷಿಗಳ ಸಂರಕ್ಷಣೆ ನಮ್ಮನಿಮ್ಮೆಲರ ಆದ್ಯ ಕರ್ತವ್ಯವಾಗಿದೆ ಎಂದರು.
ಪ್ರಸ್ತುತ ಮನುಷ್ಯ ಆಧುನಿಕ ನಾಗರಿಕತೆ ಅಪ್ಪಿಕೊಳ್ಳುತ್ತಿದ್ದು, ಸಂಬಂಧಗಳ ಮೌಲ್ಯ ಕಡಿಮೆಯಾಗುತ್ತಿದೆ. ಈಚೆಗೆ ಅವಿಭಕ್ತ ಕುಟುಂಬಗಳು ಮರೆಯಾಗು­ತ್ತಿರುವುದೂ ಅರಾಜಕತೆಯ ಸಮಾಜ ನಿರ್ಮಾಣಕ್ಕೆ ಕಾರಣವಾ­ಗುತ್ತಿದೆ ಎಂದು ಜಂಗಮ ಸೇವಾ ಸಮಿತಿ ಯುವ ಘಟಕದ ಕಾರ್ಯದರ್ಶಿ ಯಾದ ವೀರೇಶ ಕ್ಯಾತ್ನಟ್ಟಿ ಅವರು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ, ಜಂಗಮ ಸಮಾಜದ ಅಧ್ಯಕ್ಷ ಕರಿಬಸವಯ್ಯ ಸಿಂಧನೂರುಮಠ,ಶಿವಶಂಕರಯ್ಯ ಸ್ವಾಮಿ ಗಚ್ಚಿನಮಠ, ಮಲ್ಲಿಕಾರ್ಜುನ, ಗ್ಯಾನಪ್ಪ ಮೆದಿಕಿನಾಳ, ಮಾರುತಿ ಜಿನ್ನಾಪುರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು