12:44 AM Friday16 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ಮಸ್ಕಿ: ಗಚ್ಚಿನ ಮಠದಲ್ಲಿ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ

17/05/2025, 00:44

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ

info.reporterkarnataka@gmail.com

ಪ್ರಕೃತಿ ಫೌಂಡೇಶನ್ ಹಾಗೂ ಜಗದ್ಗುರು ರೇಣುಕಾಚಾರ್ಯ ಯುವ ಘಟಕ ವತಿಯಿಂದ ಕುಟುಂಬ ದಿನಾಚರಣೆ ಪ್ರಯುಕ್ತ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ ನಡೆಯಿತು.
ಗಚ್ಚಿನ ಮಠದಲ್ಲಿ ಮರಗಳಿಗೆ ಮಣ್ಣಿನ ಮಡಕೆ ಕಟ್ಟಿ, ಮಡಕೆಯಲ್ಲಿ ನೀರು, ಕಾಳು, ಅಕ್ಕಿಯನ್ನು ಹಾಕುವ ಮೂಲಕ ಪಕ್ಷಿಗಳಿಗೆ ದಾಹ, ಹಸಿವು ನೀಗಿಸುವ ಉತ್ತಮ ಕಾರ್ಯ ಎಂದು ಜಂಗಮ ಸಮಾಜದ ಯುವ ಘಟಕದ ಅಧ್ಯಕ್ಷ ಸಿದ್ದಯ್ಯ ಹೆಸರೂರು ಹಿರೇಮಠ ಹೇಳಿದರು.
ಪ್ರಕೃತಿ ಫೌಂಡೇಶನ್ ನ ಸಂಸ್ಥಾಪಕ ಅಧ್ಯಕ್ಷ, ಶಿವಮೂರ್ತಿ ಗದ್ಗಿಮಠ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ 5ನೇ ವರ್ಷದ ನಮ್ಮ ನಡೆ ಪ್ರಾಣಿ, ಪಕ್ಷಿಗಳ ರಕ್ಷಣೆ ಕಡೆ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ .
ಬಿರು ಬೇಸಿಗೆಯಲ್ಲಿ ಪ್ರಕೃತಿಯಲ್ಲಿ ಕುಡಿಯಲು ನೀರಿನ ತೀವ್ರ ಕೊರತೆಯಿಂದ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೀಡಾಗುತ್ತಿವೆ. ಹಾಗಾಗಿ ಸಾರ್ವಜನಿಕರು ಪ್ರಾಣಿ, ಪಕ್ಷಿಗಳಿಗಾಗಿ ತಮ್ಮ ತಮ್ಮ ಮನೆಯ ಮುಂದೆ ಹಾಗೂ ಮನೆಯ ಮೇಲೆ ನೀರು, ಕಾಳು ಇತರೆ ಧಾನ್ಯ ಅಥವಾ ಆಹಾರವನ್ನು ಇರಿಸಿ ಪ್ರಾಣಿ ಪಕ್ಷಿಗಳ ದಾಹ, ಹಸಿವು ನೀಗಿಸಿ ಮಾನವೀಯತೆ ಮೆರೆಯೋಣ. ಮೂಕ ಪ್ರಾಣಿ ಪಕ್ಷಿಗಳ ಸಂರಕ್ಷಣೆ ನಮ್ಮನಿಮ್ಮೆಲರ ಆದ್ಯ ಕರ್ತವ್ಯವಾಗಿದೆ ಎಂದರು.
ಪ್ರಸ್ತುತ ಮನುಷ್ಯ ಆಧುನಿಕ ನಾಗರಿಕತೆ ಅಪ್ಪಿಕೊಳ್ಳುತ್ತಿದ್ದು, ಸಂಬಂಧಗಳ ಮೌಲ್ಯ ಕಡಿಮೆಯಾಗುತ್ತಿದೆ. ಈಚೆಗೆ ಅವಿಭಕ್ತ ಕುಟುಂಬಗಳು ಮರೆಯಾಗು­ತ್ತಿರುವುದೂ ಅರಾಜಕತೆಯ ಸಮಾಜ ನಿರ್ಮಾಣಕ್ಕೆ ಕಾರಣವಾ­ಗುತ್ತಿದೆ ಎಂದು ಜಂಗಮ ಸೇವಾ ಸಮಿತಿ ಯುವ ಘಟಕದ ಕಾರ್ಯದರ್ಶಿ ಯಾದ ವೀರೇಶ ಕ್ಯಾತ್ನಟ್ಟಿ ಅವರು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ, ಜಂಗಮ ಸಮಾಜದ ಅಧ್ಯಕ್ಷ ಕರಿಬಸವಯ್ಯ ಸಿಂಧನೂರುಮಠ,ಶಿವಶಂಕರಯ್ಯ ಸ್ವಾಮಿ ಗಚ್ಚಿನಮಠ, ಮಲ್ಲಿಕಾರ್ಜುನ, ಗ್ಯಾನಪ್ಪ ಮೆದಿಕಿನಾಳ, ಮಾರುತಿ ಜಿನ್ನಾಪುರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು