5:54 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಮಸ್ಕಿ: ಗಚ್ಚಿನ ಮಠದಲ್ಲಿ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ

17/05/2025, 00:44

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ

info.reporterkarnataka@gmail.com

ಪ್ರಕೃತಿ ಫೌಂಡೇಶನ್ ಹಾಗೂ ಜಗದ್ಗುರು ರೇಣುಕಾಚಾರ್ಯ ಯುವ ಘಟಕ ವತಿಯಿಂದ ಕುಟುಂಬ ದಿನಾಚರಣೆ ಪ್ರಯುಕ್ತ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ ನಡೆಯಿತು.
ಗಚ್ಚಿನ ಮಠದಲ್ಲಿ ಮರಗಳಿಗೆ ಮಣ್ಣಿನ ಮಡಕೆ ಕಟ್ಟಿ, ಮಡಕೆಯಲ್ಲಿ ನೀರು, ಕಾಳು, ಅಕ್ಕಿಯನ್ನು ಹಾಕುವ ಮೂಲಕ ಪಕ್ಷಿಗಳಿಗೆ ದಾಹ, ಹಸಿವು ನೀಗಿಸುವ ಉತ್ತಮ ಕಾರ್ಯ ಎಂದು ಜಂಗಮ ಸಮಾಜದ ಯುವ ಘಟಕದ ಅಧ್ಯಕ್ಷ ಸಿದ್ದಯ್ಯ ಹೆಸರೂರು ಹಿರೇಮಠ ಹೇಳಿದರು.
ಪ್ರಕೃತಿ ಫೌಂಡೇಶನ್ ನ ಸಂಸ್ಥಾಪಕ ಅಧ್ಯಕ್ಷ, ಶಿವಮೂರ್ತಿ ಗದ್ಗಿಮಠ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ 5ನೇ ವರ್ಷದ ನಮ್ಮ ನಡೆ ಪ್ರಾಣಿ, ಪಕ್ಷಿಗಳ ರಕ್ಷಣೆ ಕಡೆ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ .
ಬಿರು ಬೇಸಿಗೆಯಲ್ಲಿ ಪ್ರಕೃತಿಯಲ್ಲಿ ಕುಡಿಯಲು ನೀರಿನ ತೀವ್ರ ಕೊರತೆಯಿಂದ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೀಡಾಗುತ್ತಿವೆ. ಹಾಗಾಗಿ ಸಾರ್ವಜನಿಕರು ಪ್ರಾಣಿ, ಪಕ್ಷಿಗಳಿಗಾಗಿ ತಮ್ಮ ತಮ್ಮ ಮನೆಯ ಮುಂದೆ ಹಾಗೂ ಮನೆಯ ಮೇಲೆ ನೀರು, ಕಾಳು ಇತರೆ ಧಾನ್ಯ ಅಥವಾ ಆಹಾರವನ್ನು ಇರಿಸಿ ಪ್ರಾಣಿ ಪಕ್ಷಿಗಳ ದಾಹ, ಹಸಿವು ನೀಗಿಸಿ ಮಾನವೀಯತೆ ಮೆರೆಯೋಣ. ಮೂಕ ಪ್ರಾಣಿ ಪಕ್ಷಿಗಳ ಸಂರಕ್ಷಣೆ ನಮ್ಮನಿಮ್ಮೆಲರ ಆದ್ಯ ಕರ್ತವ್ಯವಾಗಿದೆ ಎಂದರು.
ಪ್ರಸ್ತುತ ಮನುಷ್ಯ ಆಧುನಿಕ ನಾಗರಿಕತೆ ಅಪ್ಪಿಕೊಳ್ಳುತ್ತಿದ್ದು, ಸಂಬಂಧಗಳ ಮೌಲ್ಯ ಕಡಿಮೆಯಾಗುತ್ತಿದೆ. ಈಚೆಗೆ ಅವಿಭಕ್ತ ಕುಟುಂಬಗಳು ಮರೆಯಾಗು­ತ್ತಿರುವುದೂ ಅರಾಜಕತೆಯ ಸಮಾಜ ನಿರ್ಮಾಣಕ್ಕೆ ಕಾರಣವಾ­ಗುತ್ತಿದೆ ಎಂದು ಜಂಗಮ ಸೇವಾ ಸಮಿತಿ ಯುವ ಘಟಕದ ಕಾರ್ಯದರ್ಶಿ ಯಾದ ವೀರೇಶ ಕ್ಯಾತ್ನಟ್ಟಿ ಅವರು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ, ಜಂಗಮ ಸಮಾಜದ ಅಧ್ಯಕ್ಷ ಕರಿಬಸವಯ್ಯ ಸಿಂಧನೂರುಮಠ,ಶಿವಶಂಕರಯ್ಯ ಸ್ವಾಮಿ ಗಚ್ಚಿನಮಠ, ಮಲ್ಲಿಕಾರ್ಜುನ, ಗ್ಯಾನಪ್ಪ ಮೆದಿಕಿನಾಳ, ಮಾರುತಿ ಜಿನ್ನಾಪುರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು