1:26 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಗ್ರೇಟರ್ ಬೆಂಗಳೂರು ವಿರುದ್ದ ಹೋರಾಟ, ಬೆಂಗಳೂರು ಬಂದ್ ಮಾಡಲಾಗುವುದು: ವಾಟಾಳ್ ನಾಗರಾಜ್ ಎಚ್ಚರಿಕೆ

17/05/2025, 18:31

ಬೆಂಗಳೂರು(reporterkarnataka.com): ಸರಕಾರ ಮಾಡಲು ಉದ್ದೇಶಿಸಿರುವ ಗ್ರೇಟರ್ ಬೆಂಗಳೂರು ವಿರುದ್ಧ ಹೋರಾಟ ನಡೆಸಲಾಗುವುದು. ಅಗತ್ಯ ಬಿದ್ದರೆ ಬೆಂಗಳೂರು ಬಂದ್ ಮಾಡಲಾಗುವುದು. ಜೈಲಿಗೂ ಹೋಗಲು ಸಿದ್ದ ಎಂದು ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಗ್ರೇಟರ್ ಬೆಂಗಳೂರು ವಿರೋಧಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಗ್ರೇಟರ್ ಬೆಂಗಳೂರು ಕರ್ನಾಟಕ ಸರ್ಕಾರ ಹೊಸದಾಗಿ ನಿರ್ಮಾಣ ಮಾಡಲು ಹೊರಟಿದ್ದಾರೆ. ಅದಕ್ಕೂ ಮುಂಚೆ ಬಿಬಿಎಂಪಿ ಮತ್ತು ನಗರ ಸಭೆ ಇತ್ತು.1964 ಮತ್ತು 1973ರಲ್ಲಿ ನಗರಸಭೆಯಲ್ಲಿ ನಾನು ಸದಸ್ಯನಾಗಿದ್ದೇ. ಗ್ರೇಟರ್ ಬೆಂಗಳೂರು ಬೇಕಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಗಂಭೀರವಾಗಿ ಚಿಂತನೆ ಮಾಡಬೇಕು ಎಂದರು.
ಬೆಂಗಳೂರು ನಗರದ ನಾಗರಿಕರಿಗೆ ಅಪಶುಕುನ, ಕೆಟ್ಟಸಂಸ್ಕೃತಿ ನಾಂದಿಯಾಗಿದೆ. ಚುನಾವಣೆ ಮುಂದೂಡಿಕೆ ಮಾಡುವ ತಂತ್ರವಾಗಿದೆ.
ಗ್ರೇಟರ್ ಬೆಂಗಳೂರುನಿಂದ ಆನಾಹುತವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಉಪಮುಖ್ಯಮಂತ್ರಿಯಾಗಿರುತ್ತಾರೆ. ಬಿಜೆಪಿ, ಕಾಂಗ್ರೆಸ್ ಯಾವ ಪಕ್ಷ ಅಧಿಕಾರ ಚುಕ್ಕಾಣೆ ಹಿಡಿದರು ನಮಗೆ ಸಂಬಂಧವಿಲ್ಲ. ಸ್ಥಳೀಯ ಜನಪ್ರತಿನಿಧಿ ಇದ್ದರೆ ಅವರೆ ಸಮಸ್ಯೆಗಳನ್ನು ನೋಡುತ್ತಾರೆ. ಅದರೆ ಇವಾಗ ಸಮಸ್ಯೆ ಕೇಳುವವರಿಲ್ಲ.
ಗುಂಡಿ ಬೆಂಗಳೂರು ಆಗಿದೆ, ಮೊದಲು ಗುಂಡಿ ಮುಚ್ಚುವ ಕೆಲಸವಾಗಬೇಕು. ಕನಕಪುರ, ರಾಮನಗರ ಹಲವಾರು ಪ್ರದೇಶಗಳನ್ನು ಸೇರಿಸುವುದರಿಂದ ಪರಿಹಾರ ಸಾಧ್ಯವಿಲ್ಲ ಎಂದು ಅವರು ನುಡಿದರು.

ಮಹಾಪೌರರು ಒಬ್ಬರೇ ಸಾಕು. ಮೂರು ಮೇಯರ್ ಇದ್ದರೆ ಎತ್ತು ಎರಿಗೆ ಏಳಿಯಿತು, ಕೋಣ ನೀರಿಗೆ ಇಳಿಯಿತು ಎಂಬತಾಗುತ್ತದೆ. ಗ್ರೇಟರ್ ಬೆಂಗಳೂರು ವಿರುದ್ದ ಬೃಹತ್ ಸಾರ್ವಜನಿಕರಿಂದ ಚಳುವಳಿ ಮಾಡಲಾಗುವುದು.
ನಾಡಪ್ರಭು ಕೆಂಪೇಗೌಡರ ಇತಿಹಾಸಕ್ಕೆ ಗ್ರೇಟರ್ ಬೆಂಗಳೂರು ಕೆಟ್ಟ ಸಂಪ್ರದಾಯ ಹಾದಿಕೊಟ್ಟಂತೆ ಆಗುತ್ತದೆ, ಬಿಬಿಎಂಪಿ ಚುನಾವಣೆ ಮಾಡಿ. ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದರೆ ಬೆಂಗಳೂರು ಬಂದ್ ಕರೆ ನೀಡಲಾಗುವುದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು