3:03 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧಾ ಕೂಟ ; ಕೆ.ಎಮ್.ಸಿ. ಮಣಿಪಾಲ್ ತಂಡಕ್ಕೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ 2025 ಪ್ರಶಸ್ತಿ

19/05/2025, 15:11

ಮಂಗಳೂರು(reporterkarnataka.com)

ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ 2025 ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕೂಟದಲ್ಲಿ ಕೆ.ಎಮ್.ಸಿ. ಮಣಿಪಾಲ್ ತಂಡವನ್ನು ಪ್ರತಿನಿಧಿಸಿದ ಡಾ. ಅದಿಥಿ ರಾವ್ ಮತ್ತು ಡಾ. ಸಾಯಿ ಭವಾನಿ ರೆಡ್ಡಿ ಪ್ರಥಮ ಸ್ಥಾನ ಗಳಿಸಿ ಮೆಡಿಕ್ವಿಜ್ ಪ್ರಶಸ್ತಿ ಪಡೆದರು. ಕಣಚೂರು ವೈದ್ಯಕೀಯ ಕಾಲೇಜನ್ನು ಪ್ರತಿನಿಧಿಸಿದ ಡಾ. ವಿನಾಯಕ್ ಎಸ್.ಕೆ. ಮತ್ತು ಡಾ. ರಾಘವೇಂದ್ರ ಡಿ. ತಂಡವು ದ್ವಿತೀಯ ಸ್ಥಾನ, ತೃತೀಯ ಸ್ಥಾನವನ್ನು ನಗರದ ಏ.ಜೆ. ವ್ಯದ್ಯಕೀಯ ಕಾಲೇಜಿನ ಡಾ. ವರುಣ್ ಶೆಟ್ಟಿ ಮತ್ತು ಡಾ. ಅಭಿನ್ ರೈ ಗಳಿಸಿತು.

ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಡಾ. ಮೊಹಮ್ಮದ್ ಇಸ್ಮಯಿಲ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು “ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳು ಶೈಕ್ಷಣಿಕ ಸ್ಪರ್ಧಾಕೂಟದಲ್ಲಿ ಪಾಲ್ಗೊಂಡು ತಮ್ಮ ಶೈಕ್ಷಣಿಕ ಜ್ಞಾನವನ್ನು ವೃದ್ಧಿಸಿದರೆ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು” ಎಂದು ಸಲಹೆ ನೀಡಿ ಸ್ಪರ್ಧಾ ವಿಜೇತರ ಸಾಧನೆಯನ್ನು ಪ್ರಶಂಸಿಸಿ ಪ್ರಶಸ್ತಿ, ಆಕರ್ಷಕ ಬಹುಮಾನ ಮತ್ತು ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರದಾನ ಮಾಡಿ ಅಭಿನಂದಿಸಿದರು.

ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಡಾ. ಶಹನವಾಜ್ ಮಾಣಿಪ್ಪಾಡಿ ಮತ್ತು ಕಣಚೂರು ವೈದ್ಯಕೀಯ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ ಮತ್ತು ಸಲಹಾ ಸಮಿತಿಯ ಸದಸ್ಯ ಪ್ರೊ. ಡಾ. ಎಂ.ವಿ. ಪ್ರಭು ಉಪಸ್ಥಿತರಿದ್ದರು. ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಡಾ. ದೇವದಾಸ್ ರೈರವರು ಸ್ಪರ್ಧಾಕೂಟವನ್ನು ನಿರೂಪಿಸಿದರು.

ಅವಿಭಾಜಿತ ದ.ಕ. ಜಿಲ್ಲೆಯ ವಿವಿಧ ವೈದ್ಯಕೀಯ ಶಿಕ್ಷಣ ಕಾಲೇಜಿನ 28 ತಂಡಗಳು ನಿರ್ಣಾಯಕ ಮತ್ತು ಅಂತಿಮ ಸುತ್ತಿಗೆ ಪ್ರವೇಶ ಪಡೆದಿದ್ದವು.

ಪ್ರೊ. ಡಾ. ದೇವದಾಸ್ ರೈ ಸ್ವಾಗತಿಸಿ ಸ್ಪರ್ಧಾಕೂಟದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಮೊಹಮ್ಮದ್ ಶಹಾದ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಎಂ.ವಿ. ಮಲ್ಯರವರು ಬಹುಮಾನಗಳನ್ನು ಪ್ರಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು