12:07 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಸರಕಾರ ಚಿಂತನೆ

19/05/2025, 19:56

ಹೊಸಪೇಟೆ(reporterkarnataka.com): ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಹೇಳಿದರು.
ಇಂದು ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಾವಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

*ಉತ್ತಮ ಜಾಗ ಮಂಜೂರು:*
ಕಮಲಾಪುರದ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಉತ್ತಮ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಏಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

*ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ:*
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀಟರ್‌ ನಾನೋಸೀಮ್ ಡೋಮ್‌‌ ತಾರಾಲಯ ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಎನ್‌ ಎಸ್‌ ಭೋಸರಾಜು ತಿಳಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್‌ನ) ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ, ನಮ್ಮ ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವೂ ಆಗಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸ್ಥಾಪಿಸಲು ಉದ್ದೇಶಿಸಿರುವ ನೂತನ ವಿಜ್ಞಾನ ಕೇಂದ್ರದ ಸ್ಥಳವನ್ನು ಇಂದು ಭೇಟಿನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಯಿತು.
ಈ ಸಂದರ್ಭದಲ್ಲಿ, ವಿಜ್ಞಾನ ತಂತ್ರಜ್ಞಾನ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು