8:58 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ

22/05/2021, 17:14


ಮಂಡ್ಯ(reporterkarnataka news)

ಜಾನಪದ ವಿದ್ವಾಂಸ,  ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು.

1936 ಅಕ್ಟೋಬರ್ 16ರಂದು ರಾಮಣ್ಣ ಗೌಡ ಮತ್ತು ಚನ್ನಮ್ಮ ದಂಪತಿಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಜನಿಸಿದರು.

 ಮೈಸೂರಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿ, ವಿಶ್ವವಿದ್ಯಾನಿಲಯಗಳಿಗೂ ಮುನ್ನವೇ ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯದಲ್ಲಿ ತೊಡಗಿ 1959ರಲ್ಲಿ “ಜಾನಪದ ಅಕಾಡೆಮಿ” ಸ್ಥಾಪಿಸಿದರು.

 ಅವರ ಸಂಪಾದನಾ ಕೃತಿಗಳು 
೧.ಜಾನಪದ ಪ್ರೇಮಗೀತೆಗಳು
೨.ಜೇನ ಹನಿಗಳು
೩.ಆಯ್ದ ನಾಡ ಹಾಡುಗಳು
೪.ಜನಪ್ರಿಯ ಜಾನಪದ ಗೀತೆಗಳು ಇತ್ಯಾದಿ ಮುವತ್ನಾಲ್ಕುಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 9-00 ಗಂಟೆಗೆ ಸ್ವಗ್ರಾಮ ಕದಬಹಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಪತ್ನಿ ಲಲಿತಮ್ಮ ತಿಳಿಸಿದ್ದಾರೆ.

 ಮಗಳು ಡಾ. ದೀಪಿಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗ ತುಷಾರ್ ಎಂಬಿಎ ಪದವೀಧರ ನಾಗಿದ್ದು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು