7:48 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ

22/05/2021, 17:14


ಮಂಡ್ಯ(reporterkarnataka news)

ಜಾನಪದ ವಿದ್ವಾಂಸ,  ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು.

1936 ಅಕ್ಟೋಬರ್ 16ರಂದು ರಾಮಣ್ಣ ಗೌಡ ಮತ್ತು ಚನ್ನಮ್ಮ ದಂಪತಿಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಜನಿಸಿದರು.

 ಮೈಸೂರಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿ, ವಿಶ್ವವಿದ್ಯಾನಿಲಯಗಳಿಗೂ ಮುನ್ನವೇ ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯದಲ್ಲಿ ತೊಡಗಿ 1959ರಲ್ಲಿ “ಜಾನಪದ ಅಕಾಡೆಮಿ” ಸ್ಥಾಪಿಸಿದರು.

 ಅವರ ಸಂಪಾದನಾ ಕೃತಿಗಳು 
೧.ಜಾನಪದ ಪ್ರೇಮಗೀತೆಗಳು
೨.ಜೇನ ಹನಿಗಳು
೩.ಆಯ್ದ ನಾಡ ಹಾಡುಗಳು
೪.ಜನಪ್ರಿಯ ಜಾನಪದ ಗೀತೆಗಳು ಇತ್ಯಾದಿ ಮುವತ್ನಾಲ್ಕುಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 9-00 ಗಂಟೆಗೆ ಸ್ವಗ್ರಾಮ ಕದಬಹಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಪತ್ನಿ ಲಲಿತಮ್ಮ ತಿಳಿಸಿದ್ದಾರೆ.

 ಮಗಳು ಡಾ. ದೀಪಿಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗ ತುಷಾರ್ ಎಂಬಿಎ ಪದವೀಧರ ನಾಗಿದ್ದು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು