1:18 AM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ಕರಾವಳಿ ಜಿಲ್ಲೆಗಳ ಮಳೆಹಾನಿ ಕುರಿತು ಸಿಎಂ, ಸಚಿವರ ಜತೆ ಚರ್ಚೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

21/05/2025, 23:34

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಿದ್ದು ಬಿಟ್ಟರೆ ದೊಡ್ಡದಾದ ಅನಾಹುತಗಳು ನಡೆದ ವರದಿಯಾಗಿರುವುದಿಲ್ಲ. ಹೀಗಾಗಿ ಮಳೆಹಾನಿ ಪ್ರದೇಶಗಳಲ್ಲಿ ಈಗಾಗಲೇ ಸಮೀಕ್ಷೆಯನ್ನು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಸಮಾಲೋಚನೆಯನ್ನು ನಡೆಸಿದ್ದು ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ, ಗಾಳಿಯಿಂದ ಹೆಚ್ಚಿನ ಅಪಾಯ ಮತ್ತು ಹಾನಿಯುಂಟಾಗುವುದನ್ನು ತಡೆಯಲು ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ನಿರ್ದೇಶನವನ್ನು ನೀಡಿದ್ದೇನೆ. ಮುಖ್ಯಮಂತ್ರಿಗಳು ಹಾಗೂ ಸಚಿವರ ಬಗ್ಗೆ ಈ ಕುರಿತು ಮಾತಾಡಿ ಜಿಲ್ಲೆಯಲ್ಲಿ ಮಳೆಯಿಂದ ಆಗುವ ತೊಂದರೆಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು