9:02 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ

23/05/2025, 20:49

ಬೆಂಗಳೂರು(reporterkarnataka.com): ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ ಸ್ಕೂಲ್ ಆಫ್ ಎಂಜಿನಿಯರಿಂಗ್ ವತಿಯಿಂದ ಮೇ 23ರಂದು 14ನೇ ಜಿಸಿಯು ಪುರಸ್ಕಾರ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಗೌರವಾನ್ವಿತ ಕುಲಾಧಿಪತಿಗಳಾದ ಡಾ.ಜೋಸೆಫ್ ವಿ.ಜಿ ಅವರು ಉದ್ಘಾಟಿಸಿದರು.



ಈ ಕಾರ್ಯಕ್ರಮವು ತಂತ್ರಜ್ಞಾನ ಮತ್ತು ಉದ್ಯಮಶೀಲತೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ಸಾಧಕರನ್ನು ಗುರುತಿಸಿ ಅವರಿಗೆ 14ನೇ ಜಿಸಿಯು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕುಲಾಧಿಪತಿಗಳಾದ ಡಾ.ಜೋಸೆಫ್ ಅವರು ಮಾತನಾಡಿ, ಉದ್ಯಮಿಗಳು ಹೆಚ್ಚಾಗಿ ಶೈಕ್ಷಣಿಕ ವೇದಿಕೆಯಲ್ಲಿ ಕೌಶಲ್ಯಗಳ ಕುರಿತು ತಿಳಿಸಿಕೊಡಲು ಈ ರೀತಿಯಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಪ್ರೇರೇಪಿಸಿದರು. ಜೊತೆಗೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಶೈಕ್ಷಣಿಕ ಹಾಗೂ ವೃತ್ತಿ ಜೀವನದಲ್ಲಿ ಪ್ರೇರಣೆಯಾಗಿ, ಭವಿಷ್ಯದ ಸಾಧಕರನ್ನಾಗಿ ಮಾಡುವತ್ತ ವಿಶ್ವವಿದ್ಯಾಲಯವು ಮುಂದಾಗಿದೆ ಎಂಬುದನ್ನು ತಿಳಿಸಿಕೊಡುವುದರ ಜೊತೆಗೆ ಸಾಮಾಜಿಕ ಮತ್ತು ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿಯೂ ಆಗಬೇಕು ಎಂದರು.
ಸಂಪರ್ಕಿಸಿ: ಸಾರ್ವಜನಿಕ ಸಂಪರ್ಕ ಕಚೇರಿ
ಗಾರ್ಡನ್ ಸಿಟಿ ವಿಶ್ವವಿದ್ಯಾಲಯ
ಇಮೇಲ್: pro@gardencity.university
ವೆಬ್‌ಸೈಟ್: www.gardencity.university

ಇತ್ತೀಚಿನ ಸುದ್ದಿ

ಜಾಹೀರಾತು