11:10 PM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

26/05/2025, 12:54

ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ. ‌
ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ.
ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು