1:49 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಂಟರ ಸಂಘ ಬಂಟವಾಳ: ವಿಜೃಂಭಿಸಿದ ವಿಂಶತಿ ಸಂಭ್ರಮ, ಸಾಧಕರ ಸನ್ಮಾನ: ವೈಭವದ ಯುವೋಚ್ಚಯ

26/05/2025, 13:11

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟವಾಳದ ಬಂಟರ ಭವನದಲ್ಲಿ ನಡೆದ ವಿಂಶತಿ ಸಂಭ್ರಮ ಅದ್ದೂರಿಯಿಂದ ಸಂಪನ್ನಗೊಂಡಿತು.
ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ ನೇತೃತ್ವದಲ್ಲಿ ಎರಡು ದಿನಗಳ ಸಮಾರಂಭ ಯಶಸ್ವಿಯಾಗಿ ಎಲ್ಲಾ ಸಮಾಜ ಬಾಂಧವರ ಮೆಚ್ಚುಗೆಗೆ ಪಾತ್ರವಾಯಿತು.
ಶ್ರೀದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರು ಡಾ.ಎ.ಸದಾನಂದ‌ಶೆಟ್ಟಿ, ಎಂ.ಆರ್.ಜಿ ಗ್ರೂಪ್ ಅಧ್ಯಕ್ಷರು ಡಾ.ಪ್ರಕಾಶ ಶೆಟ್ಟಿ ಬಂಜಾರ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಐಕಳ ಹರೀಶ ಶೆಟ್ಟಿ ವಿಂಶತಿ ಗೌರವ ಸ್ವೀಕರಿಸಿ ಕೃತಜ್ಞತಾ ಭಾವ ವ್ಯಕ್ತಪಡಿಸಿದರು. ಸಮಾಜ ಸೇವೆಯಲ್ಲಿ ಅಗ್ರಗಣ್ಯರಾದ 20 ಮಂದಿ ಸಾಧಕರನ್ನು ಗುರುತಿಸಿ ವಿಂಶತಿ ಸನ್ಮಾನ ಮಾಡಲಾಯಿತು. ಮೂರು ವಿಭಾಗಗಳಲ್ಲಿ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮದಲ್ಲಿ 700ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಳ್ವಾಸ್ ವಿದ್ಯಾಸಂಸ್ಥೆಯ ಡಾ.ಮೋಹನ ಆಳ್ವ, ಸಹ್ಯಾದ್ರಿ ವಿದ್ಯಾ ಸಂಸ್ಥೆಯ ಡಾ.ಮಂಜುನಾಥ ಭಂಡಾರಿ, ಅಡ್ಯಾರ್ ಗಾರ್ಡನ್ ಮಾಲಕ ಕಿಶನ್ ಶೆಟ್ಟಿ ಮಾಹಿತಿ ನೀಡಿದರು.


ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ವಲಯ ಮತ್ತು ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಪ್ರೇಕ್ಷಕರ ಮನಗೆದ್ದಿತು.
ಮಾಜಿ ಅಧ್ಯಕ್ಷ ಲೋಕನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭವನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಉದ್ಘಾಟಿಸಿ ಶ್ಲಾಘಿಸಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಎಂ.ಸಿ.ಆರ್.ಶೆಟ್ಟಿ ಬೆಂಗಳೂರು ಮೊದಲಾದ ಗಣ್ಯ ಅತಿಥಿಗಳು ಅಭಿನಂದಿಸಿ ಮಾತನಾಡಿದರು. ಗಾನ, ನೃತ್ಯ, ಆಹಾರ ಮೇಳಗಳು ಯುವ ಬಂಟರ ಪಾಲ್ಗೊಳ್ಳುವಿಕೆಯಲ್ಲಿ ಯುವೋಚ್ಚಯ ವೈಭವದಿಂದ ನೆರವೇರಿತು.
ಒಟ್ಟು ಸಮಾವೇಶ ಸಂಯೋಜಕರಾದ ಚಂದ್ರಹಾಸ ಡಿ.ಶೆಟ್ಟಿ, ಜಗನ್ನಾಥ ಚೌಟ, ಡಾ.ಪ್ರಶಾಂತ ಮಾರ್ಲ, ಲೋಕೇಶ್ ಶೆಟ್ಟಿ ಕುಳ,ರಂಜನ್ ಕುಮಾರ್ ಶೆಟ್ಟಿ ಅರಳ, ಪ್ರತಿಭಾ ಎ.ರೈ ಪಾಣೆಮಂಗಳೂರು, ರಮಾ ಎಸ್.ಭಂಡಾರಿ, ನಿಶಾನ್ ಆಳ್ವ ಬಿಸಿರೋಡ್, ಬಾಲಕೃಷ್ಣ ಆಳ್ವ ಕೊಡಾಜೆ ಯಶಸ್ವಿನ ರೂವಾರಿಗಳಾಗಿ ಮೆಚ್ಚುಗೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು