10:51 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಸದಸ್ಯರಾಗಿ ಶಬ್ಬೀರ್ ಅಹ್ಮದ್ ಪಾಷಾ ನೇಮಕ

26/05/2025, 21:19

ಶ್ರೀನಿವಾಸಪುರ(reporterkarnataka.com): ಕೋಲಾರ ಜಿಲ್ಲೆಯ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಶ್ರೀನಿವಾಸಪುರದ ಶಬ್ಬೀರ್ ಅಹ್ಮದ್ ಪಾಷಾ ಅವರನ್ನು ಕರ್ನಾಟಕ ಸರ್ಕಾರ ಸದಸ್ಯರಾಗಿ ನೇಮಕ ಮಾಡಿದೆ.
ಸಮಾಜಸೇವೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಶಬ್ಬೀರ್ ಅಹ್ಮದ್ ಪಾಷಾ ಅವರು, ಈ ಹಿಂದೆ ಕೋಲಾರ ಜಿಲ್ಲಾ ವಕ್ಫ್ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದು, ಜೊತೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಸ್ತುತ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಹಾಗೂ ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದಲ್ಲಿ ನಿರ್ದೇಶಕರಾಗಿದ್ದಾರೆ. ಅಲ್ಲದೆ, ಶ್ರೀನಿವಾಸಪುರ ತಾಲ್ಲೂಕು ಭಾರತ ಸೇವಾದಳದ ಉಪಾಧ್ಯಕ್ಷರಾಗಿ ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೂಡಾ ಸೇವೆ ನೀಡುತ್ತಿದ್ದಾರೆ.
ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ನೇಮಕವಾದ ಹಿನ್ನೆಲೆಯಲ್ಲಿ ಸಂತೋಷ ವ್ಯಕ್ತಪಡಿಸಿರುವ ಶಬ್ಬೀರ್ ಅಹ್ಮದ್ ಪಾಷಾ ಅವರು, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಾಜಿ ಶಾಸಕ ಕೆ.ಆರ್. ರಮೇಶ್ ಕುಮಾರ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ (ಕೆ.ಎಂ.ಡಿ.ಸಿ) ನಿರ್ದೇಶಕ ಅಬ್ದುಲ್ ಖಯೂಮ್ ಹಾಗೂ ಇತರ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.
ಅಲ್ಪಸಂಖ್ಯಾತ ಸಮುದಾಯದ ಹಿತಕ್ಕಾಗಿ ಶ್ರಮಿಸುವ ಸಂಕಲ್ಪವನ್ನು ವ್ಯಕ್ತಪಡಿಸಿರುವ ಅವರು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯದವರೆಗೆ ತಲುಪಿಸಲು ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ. ಇದಲ್ಲದೆ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರತ್ತ ವಿಶೇಷ ಗಮನ ಹರಿಸುವುದಾಗಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು