2:37 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸಂಘಟಿತ ಪ್ರಯತ್ನದಿಂದ ಶ್ರೀಮಹಾ ಪವಮಾನ ಯಾಗ ಯಶಸ್ವಿ: ರಾಮದಾಸ್ ಬಂಟ್ವಾಳ ಮೆಚ್ಚುಗೆ

26/05/2025, 22:29

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಹಿಂದೂ ಸಮಾಜವನ್ನು ಸಂಘಟಿಸುವ ಮೂಲ ಉದ್ದೇಶದಿಂದ ಮಹಾಪವಮಾನ ಯಾಗ ಯಶಸ್ವಿಯಾಗಿದೆ ಎಂದು ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಭಾನುವಾರ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದ ನೂತನ ಸಭಾಂಗಣದಲ್ಲಿ ನಡೆದ ಮಹಾಪವಮಾನ ಯಾಗದ ಅವಲೋಕನ ಸಭೆಯಲ್ಲಿ ಮಾತನಾಡಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾರ್ಗದರ್ಶನದಲ್ಲಿ ಊರಪರವೂರ ಭಕ್ತರ, ಮಾತೆಯರ ಸಕ್ರಿಯ ಭಾಗವಹಿಸುವಿಕೆ ಯಾಗದ ಯಶಸ್ಸಿಗೆ ಕಾರಣವಾಯಿತು. ಸುಮಾರು ೫ ಸಾವಿರಕ್ಕೂ ಅಧಿಕ ಮಂದಿ ಯಾಗದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ಮೇ ೧೬ರಿಂದ ೧೮ರ ವರೆಗೆ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದಲ್ಲಿ ೧೦೮ ಪವಮಾನ ಪಾರಾಯಣ ಸಹಿತ ಶ್ರೀ ಮಹಾಪವಮಾನ ಯಾಗ, ೧೦೮ ಲಕ್ಷ ಶ್ರೀರಾಮ ನಾಮ ತಾರಕ ಜಪಯಜ್ಞ, ಆಂಜನೇಯ ದೇವರಿಗೆ ಸಹಸ್ರ ಕದಳಿ ಯಾಗ, ವಿಷ್ಣು ಸಹಸ್ರನಾಮ ಪಾರಾಯಣ ನೆರವೇರಿತ್ತು.
ಮಂದಿರ ಸಮಿತಿ ಗೌರವಾಧ್ಯಕ್ಷ ಸೇಸಪ್ಪ ದಾಸಯ್ಯ, ಆರೆಸ್ಸೆಸ್ ಮುಖಂಡ ವಿನೋದ್ ಕೊಡ್ಮಾಣ್, ಪ್ರಮುಖರಾದ ಗಣೇಶ್ ದಾಸ್ ಕಾಮೆರೆಕೋಡಿ, ಶೇಖರ ಶೆಟ್ಟಿ ಪೊಟ್ಟುಗುಡ್ಡೆ, ತಾರನಾಥ ಕೊಟ್ಟಾರಿ ತೇವು, ಉಮೇಶ್ ಗಾಂದೋಡಿ, ಹರಿಪ್ರಸಾದ್ ಭಂಡಾರಿಬೆಟ್ಟು, ಸಂದೇಶ್ ದರಿಬಾಗಿಲು, ಸತೀಶ್ ಪಲ್ಲಮಜಲು, ದಿವಾಕರ ಶೆಟ್ಟಿ ಕುಪ್ಪಿಲ, ನಿತೇಶ್ ಪಲ್ಲಮಜಲು, ಪ್ರಶಾಂತ್ ಬೆದ್ರಗುಡ್ಡೆ, ಮನೋಜ್ ಪಲ್ಲಮಜಲು, ಚೈತನ್ಯ ಗಣೇಶ್ ದಾಸ್, ಜ್ಯೋತಿ ಮಧು ಆಚಾರ್ಯ, ದೀಕ್ಷಿತಾ, ನಿವೇದಿತಾ, ಯಶಸ್ವಿನಿ ಉಮೇಶ್ ಕುಲಾಲ್, ಹೊನ್ನಮ್ಮ ಆನಂದ ಗೌಡ, ಶಶಿಕಲಾ ಸದಾಶಿವ, ರಮಿತಾ ಸುರೇಶ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು