12:54 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸಂಘಟಿತ ಪ್ರಯತ್ನದಿಂದ ಶ್ರೀಮಹಾ ಪವಮಾನ ಯಾಗ ಯಶಸ್ವಿ: ರಾಮದಾಸ್ ಬಂಟ್ವಾಳ ಮೆಚ್ಚುಗೆ

26/05/2025, 22:29

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಹಿಂದೂ ಸಮಾಜವನ್ನು ಸಂಘಟಿಸುವ ಮೂಲ ಉದ್ದೇಶದಿಂದ ಮಹಾಪವಮಾನ ಯಾಗ ಯಶಸ್ವಿಯಾಗಿದೆ ಎಂದು ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಭಾನುವಾರ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದ ನೂತನ ಸಭಾಂಗಣದಲ್ಲಿ ನಡೆದ ಮಹಾಪವಮಾನ ಯಾಗದ ಅವಲೋಕನ ಸಭೆಯಲ್ಲಿ ಮಾತನಾಡಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾರ್ಗದರ್ಶನದಲ್ಲಿ ಊರಪರವೂರ ಭಕ್ತರ, ಮಾತೆಯರ ಸಕ್ರಿಯ ಭಾಗವಹಿಸುವಿಕೆ ಯಾಗದ ಯಶಸ್ಸಿಗೆ ಕಾರಣವಾಯಿತು. ಸುಮಾರು ೫ ಸಾವಿರಕ್ಕೂ ಅಧಿಕ ಮಂದಿ ಯಾಗದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ಮೇ ೧೬ರಿಂದ ೧೮ರ ವರೆಗೆ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದಲ್ಲಿ ೧೦೮ ಪವಮಾನ ಪಾರಾಯಣ ಸಹಿತ ಶ್ರೀ ಮಹಾಪವಮಾನ ಯಾಗ, ೧೦೮ ಲಕ್ಷ ಶ್ರೀರಾಮ ನಾಮ ತಾರಕ ಜಪಯಜ್ಞ, ಆಂಜನೇಯ ದೇವರಿಗೆ ಸಹಸ್ರ ಕದಳಿ ಯಾಗ, ವಿಷ್ಣು ಸಹಸ್ರನಾಮ ಪಾರಾಯಣ ನೆರವೇರಿತ್ತು.
ಮಂದಿರ ಸಮಿತಿ ಗೌರವಾಧ್ಯಕ್ಷ ಸೇಸಪ್ಪ ದಾಸಯ್ಯ, ಆರೆಸ್ಸೆಸ್ ಮುಖಂಡ ವಿನೋದ್ ಕೊಡ್ಮಾಣ್, ಪ್ರಮುಖರಾದ ಗಣೇಶ್ ದಾಸ್ ಕಾಮೆರೆಕೋಡಿ, ಶೇಖರ ಶೆಟ್ಟಿ ಪೊಟ್ಟುಗುಡ್ಡೆ, ತಾರನಾಥ ಕೊಟ್ಟಾರಿ ತೇವು, ಉಮೇಶ್ ಗಾಂದೋಡಿ, ಹರಿಪ್ರಸಾದ್ ಭಂಡಾರಿಬೆಟ್ಟು, ಸಂದೇಶ್ ದರಿಬಾಗಿಲು, ಸತೀಶ್ ಪಲ್ಲಮಜಲು, ದಿವಾಕರ ಶೆಟ್ಟಿ ಕುಪ್ಪಿಲ, ನಿತೇಶ್ ಪಲ್ಲಮಜಲು, ಪ್ರಶಾಂತ್ ಬೆದ್ರಗುಡ್ಡೆ, ಮನೋಜ್ ಪಲ್ಲಮಜಲು, ಚೈತನ್ಯ ಗಣೇಶ್ ದಾಸ್, ಜ್ಯೋತಿ ಮಧು ಆಚಾರ್ಯ, ದೀಕ್ಷಿತಾ, ನಿವೇದಿತಾ, ಯಶಸ್ವಿನಿ ಉಮೇಶ್ ಕುಲಾಲ್, ಹೊನ್ನಮ್ಮ ಆನಂದ ಗೌಡ, ಶಶಿಕಲಾ ಸದಾಶಿವ, ರಮಿತಾ ಸುರೇಶ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು