9:48 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟಿಯಲ್ಲಿ ಜಾರುವ ಬಂಡೆಗಳ ಮಧ್ಯೆ ಪ್ರವಾಸಿಗರ ಅಪಾಯಕಾರಿ ಮೋಜು

27/05/2025, 13:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದ ಜಲಪಾತಗಳ ಬಳಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನಿರಂತರವಾಗಿ ನೀರು ಹರಿಯುತ್ತಿರುವ ಕಾರಣ ಬಂಡೆಗಳು ತೀವ್ರವಾಗಿ ಜಾರುತ್ತಿದ್ದು, ಅಪಾಯದ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಜೀವದ ಹಂಗು ಮರೆತು ಜಾರುವ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ವಿಡಿಯೋ ತೆಗೆದುಕೊಳ್ಳುತ್ತಿದ್ದಾರೆ.


ಈ ಹಿಂದೆ ಇದೇ ಪ್ರದೇಶದಲ್ಲಿ ಬಿದ್ದು ಕೈ-ಕಾಲು ಮುರಿದುಕೊಂಡವರು, ಜೀವ ಕಳೆದುಕೊಂಡವರೂ ಇದ್ದಾರೆ. ಹೆಚ್ಚಿನ ಮಳೆಯ ಪರಿಣಾಮವಾಗಿ ಜಲಪಾತಗಳು ಉಬ್ಬಿ ಹರಿಯುತ್ತಿದ್ದು, ಜಾರುವಿಕೆ ಹೆಚ್ಚು ಸಾಧ್ಯವಾಗುತ್ತಿದೆ.
ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೂ ಕೆಲವರು ಪೊಲೀಸರ ಕಣ್ತಪ್ಪಿಸಿ ಅಪಾಯಕರ ಸ್ಥಳಗಳಿಗೆ ಪ್ರವೇಶಿಸುತ್ತಿದ್ದಾರೆ. ಪೊಲೀಸರು ಒಂದು ಕಡೆ ಎಚ್ಚರಿಕೆಯಿಂದ ನೋಡುತ್ತಿದ್ದರೆ, ಪ್ರವಾಸಿಗರು ಮತ್ತೊಂದು ಕಡೆ ಬಂಡೆಗಳ ಮೇಲೆ ಹತ್ತುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಮತ್ತು ಇತರರ ಸುರಕ್ಷತೆಗಾಗಿ ಇಂತಹ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯುಳ್ಳ ವರ್ತನೆ ತಾಳಬೇಕು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು