9:39 AM Saturday7 - June 2025
ಬ್ರೇಕಿಂಗ್ ನ್ಯೂಸ್
ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ…

ಇತ್ತೀಚಿನ ಸುದ್ದಿ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ

27/05/2025, 23:56

ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.
ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು.
ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.
ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.
ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.


ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.
ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು