2:01 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ

27/05/2025, 23:56

ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.
ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು.
ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.
ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.
ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.


ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.
ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು