6:26 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಬಂಟ್ವಾಳ : ಅಬ್ದುಲ್ ರಹೀಮಾನ್ ಹತ್ಯೆ ಪ್ರಕರಣ ; ಸುಮಿತ್, ದೀಪಕ್ ಸೇರಿ 15 ಜನರ ವಿರುದ್ಧ ಪ್ರಕರಣ ದಾಖಲು

28/05/2025, 16:20

ಮಂಗಳೂರು (reporterkarnataka.com)

ಬಂಟ್ವಾಳದ ಕೊಳತ್ತಮಜಲಿನಲ್ಲಿ ನಡೆದ ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹತ್ಯೆಯ ಸಂದರ್ಭ ಗಾಯಗೊಂಡ ಖಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರು ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ರಹಿಮಾನ್ ಪರಿಚಯಸ್ಥರೇ ಆದ ದೀಪಕ್, ಸುಮಿತ್ ಸೇರಿ ಒಟ್ಟು 15 ಜನರ ವಿರುದ್ದ ಎಫ್ಐಆರ್ ದಾಖಲಾಗಿದೆ

ಬಿಎನ್ ಎಸ್ 103, 109, 118(1), 118(2), 190, 191(1), 191(2), 191(3) ನಡಿ ಪ್ರಕರಣ ದಾಖಲಾಗಿದ್ದು, ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರು ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಇರಾಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು.
ಈ ವೇಳೆ ಏಕಾಏಕಿ ದಾಳಿ ನಡೆದಿದ್ದು, ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು,ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ವಾ ದಾಳಿ ಮಾಡಿದ್ದಾರೆ.

ಅಲ್ಲಿದ್ದವರು ಕೂಗಾಡಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದ‌ರ್ ಶಾಫಿ ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾ‌ರ್ ಎಂಬವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು