3:19 PM Saturday7 - June 2025
ಬ್ರೇಕಿಂಗ್ ನ್ಯೂಸ್
ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ…

ಇತ್ತೀಚಿನ ಸುದ್ದಿ

ಬಂಟ್ವಾಳ : ಅಬ್ದುಲ್ ರಹೀಮಾನ್ ಹತ್ಯೆ ಪ್ರಕರಣ ; ಸುಮಿತ್, ದೀಪಕ್ ಸೇರಿ 15 ಜನರ ವಿರುದ್ಧ ಪ್ರಕರಣ ದಾಖಲು

28/05/2025, 16:20

ಮಂಗಳೂರು (reporterkarnataka.com)

ಬಂಟ್ವಾಳದ ಕೊಳತ್ತಮಜಲಿನಲ್ಲಿ ನಡೆದ ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹತ್ಯೆಯ ಸಂದರ್ಭ ಗಾಯಗೊಂಡ ಖಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರು ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ರಹಿಮಾನ್ ಪರಿಚಯಸ್ಥರೇ ಆದ ದೀಪಕ್, ಸುಮಿತ್ ಸೇರಿ ಒಟ್ಟು 15 ಜನರ ವಿರುದ್ದ ಎಫ್ಐಆರ್ ದಾಖಲಾಗಿದೆ

ಬಿಎನ್ ಎಸ್ 103, 109, 118(1), 118(2), 190, 191(1), 191(2), 191(3) ನಡಿ ಪ್ರಕರಣ ದಾಖಲಾಗಿದ್ದು, ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರು ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಇರಾಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು.
ಈ ವೇಳೆ ಏಕಾಏಕಿ ದಾಳಿ ನಡೆದಿದ್ದು, ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು,ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ವಾ ದಾಳಿ ಮಾಡಿದ್ದಾರೆ.

ಅಲ್ಲಿದ್ದವರು ಕೂಗಾಡಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದ‌ರ್ ಶಾಫಿ ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾ‌ರ್ ಎಂಬವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು