8:01 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಿಗಿ ಪೊಲೀಸ್ ಬಂದೋಬಸ್ತ್: ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನೆರವೇರಿದ ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅಂತ್ಯ ಸಂಸ್ಕಾರ

28/05/2025, 22:29

ಬಂಟ್ವಾಳ(reporterkarnataka.com): ದುಷ್ಕರ್ಮಿಗಳಿಂದ ಬೀಕರವಾಗಿ ಹತ್ಯೆಗೀಡಾದ ಪಿಕ್ ಅಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಅಂತ್ಯಸಂಸ್ಕಾರ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನಡೆಯಿತು.


ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದ ಮೃತ ಅಬ್ದುಲ್ ರಹಿಮಾನ್ ಅವರ ಅಂತ್ಯಸಂಸ್ಕಾರ ಇದೇ ಮಸೀದಿಯಲ್ಲಿ ನಡೆಯಿತು. ವಿಧಿ ವಿಧಾನಗಳನ್ನು ಮಿತ್ತಬೈಲ್ ಮಸೀದಿಯಲ್ಲಿ ನೆರವೇರಿಸಿದ ಬಳಿಕ ಕೊಳತ್ತಮಜಲಿಗೆ ಸಾಗಿಸಲಾಯಿತು. ಸುಮಾರು 2 ಕಿ.ಮೀ. ಉದ್ದಕ್ಕೂ ಬಿ.ಸಿ.ರೋಡಿನಲ್ಲಿ ಜನರು ಸೇರಿದ್ದರು.
ರಹಿಮಾನ್ ಸಾವಿನ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೈಕಂಬ ಪರಿಸರದಲ್ಲಿ ಎಲ್ಲ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಯಿತು.
*15 ಮಂದಿ ವಿರುದ್ಧ ಪ್ರಕರಣ ದಾಖಲು:*
ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಹೊಳೆಬದಿಯಿಂದ ಪಿಕ್ಅಪ್ನಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ಮನೆಯೊಂದರ ಬಳಿ ಇಳಿಸುತ್ತಿದ್ದರು. ಈ ವೇಳೆ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಹೋದ ಕಲಂದರ್ ಶಾಫಿಗೂ ಚೂರಿಯಿಂದ ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು