1:46 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಬಿಗಿ ಪೊಲೀಸ್ ಬಂದೋಬಸ್ತ್: ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನೆರವೇರಿದ ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅಂತ್ಯ ಸಂಸ್ಕಾರ

28/05/2025, 22:29

ಬಂಟ್ವಾಳ(reporterkarnataka.com): ದುಷ್ಕರ್ಮಿಗಳಿಂದ ಬೀಕರವಾಗಿ ಹತ್ಯೆಗೀಡಾದ ಪಿಕ್ ಅಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಅಂತ್ಯಸಂಸ್ಕಾರ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನಡೆಯಿತು.


ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದ ಮೃತ ಅಬ್ದುಲ್ ರಹಿಮಾನ್ ಅವರ ಅಂತ್ಯಸಂಸ್ಕಾರ ಇದೇ ಮಸೀದಿಯಲ್ಲಿ ನಡೆಯಿತು. ವಿಧಿ ವಿಧಾನಗಳನ್ನು ಮಿತ್ತಬೈಲ್ ಮಸೀದಿಯಲ್ಲಿ ನೆರವೇರಿಸಿದ ಬಳಿಕ ಕೊಳತ್ತಮಜಲಿಗೆ ಸಾಗಿಸಲಾಯಿತು. ಸುಮಾರು 2 ಕಿ.ಮೀ. ಉದ್ದಕ್ಕೂ ಬಿ.ಸಿ.ರೋಡಿನಲ್ಲಿ ಜನರು ಸೇರಿದ್ದರು.
ರಹಿಮಾನ್ ಸಾವಿನ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೈಕಂಬ ಪರಿಸರದಲ್ಲಿ ಎಲ್ಲ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಯಿತು.
*15 ಮಂದಿ ವಿರುದ್ಧ ಪ್ರಕರಣ ದಾಖಲು:*
ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಹೊಳೆಬದಿಯಿಂದ ಪಿಕ್ಅಪ್ನಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ಮನೆಯೊಂದರ ಬಳಿ ಇಳಿಸುತ್ತಿದ್ದರು. ಈ ವೇಳೆ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಹೋದ ಕಲಂದರ್ ಶಾಫಿಗೂ ಚೂರಿಯಿಂದ ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು