8:39 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

45ನೇ ವಯಸ್ಸಿನಲ್ಲಿ ಮಗು ಹೆತ್ತು 2 ದಿನಗಳ ಹಸುಗೂಸಿನ ಮಾರಾಟ: ದಂಪತಿ ಸಹಿತ 3 ಮಂದಿ ಬಂಧನ

29/05/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಎರಡು ದಿನಗಳ ಹಸುಗೂಸನ್ನು ಮಾರಾಟ ಮಾಡಿದ ಆರೋಪದ ಮೇಲೆ ಮಗುವಿನ ಹೆತ್ತವರು ಹಾಗೂ ಸಹಕರಿಸಿದ ನಿವೃತ್ತ ನರ್ಸ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ ಘಟನೆ
ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ನಡೆದಿದೆ.
ರತ್ನ-ಸದಾನಂದ ದಂಪತಿ ಹಾಗೂ ನಿವೃತ್ತ ನರ್ಸ್ ಕುಸುಮಾ ಅವರು
ಮಗು ಮಾರಾಟಮಾಡಿ ಪೊಲೀಸರಿಗೆ ಅತಿಥಿಯಾದ ಆರೋಪಿಗಳು.
ರತ್ನ-ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು, ಇಬ್ನರನ್ನ ಮಾರಾಟ ಮಾಡಿರೋ ಶಂಕೆ ವ್ಯಕ್ತವಾಗಿದೆ. ರತ್ನಾ ಅವರು ತನ್ನ 45ನೇ ವಯಸ್ಸಿನಲ್ಲಿ ಮಗುವನ್ನು ಹೆತ್ತು, 2 ದಿನಗಳ ಹಸುಗೂಸನ್ನು 1 ಲಕ್ಷ ರೂಪಾಯಿಗೆ
ಮಾರಾಟ ಮಾಡಿದ್ದಾರೆ. ಕುಸುಮಾ ಅವರು ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಿದ್ದರು. ಮಗುವನ್ನು ನಿವೃತ್ತ ನರ್ಸ್ ಕುಸುಮಾ ಅವರ ಸಹೋದರ ಕಾರ್ಕಳದ ರಾಘವೇಂದ್ರ ಎಂಬುವರಿಗೆ ಮಾರಾಟ ಮಾಡಲಾಗಿದೆ.
ಎನ್.ಆರ್. ಪುರ ಪೊಲೀಸರಿಂದ ಮಗು ರಕ್ಷಣೆ ಮಾಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ವಶದಲ್ಲಿ ಮಗು ಇದೆ.
ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು