6:24 AM Thursday5 - June 2025
ಬ್ರೇಕಿಂಗ್ ನ್ಯೂಸ್
ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ…

ಇತ್ತೀಚಿನ ಸುದ್ದಿ

ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ: ಪೊಲೀಸ್ ವೈಫಲ್ಯದ ವಿರುದ್ಧ ಇನಾಯತ್ ಆಲಿ ಆಕ್ರೋಶ

29/05/2025, 23:01

ಮಂಗಳೂರು(reporterkarnataka.com):ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ ಆ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರಗಳ ಭಾಗವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಕೆಪಿಸಿಸಿ ಪ್ರಧಾನ
ಕಾರ್ಯದರ್ಶಿ ಇನಾಯತ್ ಅಲಿ ಹೇಳಿದ್ದಾರೆ.
ಪ್ರತಿಯೊಂದು ಘಟನೆಗಳು ನಡೆದಾಗಲೂ ಅದನ್ನು ಸರಕಾರಕ್ಕೆ ತಲುಪಿಸುವಂಹ ಕೆಲಸ ನಡೆದರೂ ರಾಜ್ಯದ ಗೃಹ ಇಲಾಖೆ ಈ ಬಗ್ಗೆ ಗಮನ ಹರಿಸಿಲ್ಲ. ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆಗಳು ಒಂದೂ ಈಡೇರಿಲ್ಲ. ಹಾಗಾಗಿ, ಇನ್ನಾದರೂ ಕರಾವಳಿಯ ಈ ನೆತ್ತರ ರಾಜಕೀಯ ಕೊನೆಯಾಗಬೇಕಿದೆ. ಸರಕಾರ ದ್ವೇಷ ಭಾಷಣಕಾರರು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಿ ಇಲ್ಲಿನ ಜನರಿಗೆ ಮಿಕ್ಕ ಎಲ್ಲಾ ಗ್ಯಾರಂಟಿಗಳಿಗಿಂತ ಹೊರತಾಗಿ ಮೊದಲು ಗೌರವಯುತವಾಗಿ, ನೆಮ್ಮದಿಯಿಂದ ಬದುಕುವ ಗ್ಯಾರಂಟಿಯನ್ನು, ಶಾಂತಿಯುತ ವಾತಾವರಣವನ್ನು ನಿರ್ಮಿಸಿ ಕೊಡಬೇಕು. ಈ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು