1:04 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನವೀಕರಣ, ಬ್ರಹ್ಮಕಲಶೋತ್ಸವ ಹಾಗೂ ನೂತನ ರಥ ಸಮರ್ಪಣೆ

29/05/2025, 23:04

ಬಂಟ್ವಾಳ(reporterkarnataka.com):ಪರಿಶುದ್ದ ಮನಸ್ಸಿನಿಂದ ಪ್ರಾರ್ಥಿಸಿದಾಗ ಭಗವಂತನ ಸಾಕ್ಷತ್ಕಾರವಾಗುವುದು.
ಮನಸ್ಸು ಶುದ್ಧೀಕರಣದಿಂದ್ದಾಗ ಉತ್ತಮ ಸಮಾಜವು ನಿರ್ಮಾಣವಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಅಗ್ರಹಾರ ಬೀದಿ ಶ್ರೀಗೋಪಾಲಕೃಷ್ಣ ದೇವಸ್ಥಾನದ ನವೀಕರಣ, ಬ್ರಹ್ಮಕಲಶೋತ್ಸವ ಹಾಗೂ ನೂತನ ರಥ ಸಮರ್ಪಣೆಯ ಪ್ರಯುಕ್ತ ಬುಧವಾರ ರಾತ್ರಿ ನಡೆದ ಮೊದಲ ದಿನದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯರ ಮಧ್ಯೆ ಪ್ರೀತಿ,ವಿಶ್ವಾಸ,ನಂಬಿಕೆ ಮುಖ್ಯವಾಗಿದೆ ಎಂದರು.
ದೇವಳದ ಬ್ರಹ್ಮಕಲಶೋತ್ಸವ ಸಮಿತಿ‌ ಅಧ್ಯಕ್ಷ ರಾಕೇಶ್ ಮಲ್ಲಿ ಸಭಾಧ್ಯಕ್ಷತೆ ವಹಿಸಿದ್ದರು.
ನಾವೂರು ಗ್ರಾಪಂ ಅಧ್ಯಕ್ಷೆ ಇಂದಿರಾ,
ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪದ್ಮಶೇಖರ ಜೈನ್ ಬಲ್ಲೋಡಿಗುತ್ತು, ಬ್ರಹ್ಮಕಲಶೋತ್ಸವ ಸಮಿತಿ‌ ಗೌರವಾಧ್ಯಕ್ಷ ಸತೀಶ್ ಭಂಡಾರಿ ಕುಳತ್ತಬೆಟ್ಟು,ಬಂಟ್ವಾಳ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಉದ್ಯಮಿ ವಾಸುದೇವ ಭಟ್ ಕುಂಜಿತ್ತೂಡಿ, ನಾವೂರು ಪ್ರಾ.ಆ.ಕೇಂದ್ರದ ವೈದ್ಯರಾದ ಡಾ.ಜೀವನ್ ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ವೇಳೆ ಗುತ್ತಿಗೆದಾರ ಸೀತಾರಾಮ್ ಸಾಲಿಯಾನ್ ಅವರನ್ನು ಸನ್ಮಾನಿಸಲಾಯಿತು.
ದೇವಸ್ಥಾನದ ಪ್ರಧಾನಾರ್ಚಕರಾದ ವೇ.ಮೂ.ಸುದರ್ಶನ್ ಬಲ್ಲಾಳ್ ಪ್ರಸ್ತಾವಿಸಿ, ಸ್ವಾಗತಿಸಿದರು. ಸದಾನಂದ ಗೌಡ ನಾವೂರು ವಂದಿಸಿದರು. ರಾಜೇಶ್ ಕೊಟ್ಟಾರಿ, ಹರ್ಷರಾಜ್ ಕಾರ್ಯಕ್ರಮ ನಿರೂಪಿಸಿದರು.
*ದೇವರ ಪ್ರತಿಷ್ಠೆ:*
ಗುರುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಶ್ರೀ ಅಂಜನೇಯ ಹಾಗೂ ಶ್ರೀಸೋಮನಾಥೇಶ್ವರ ದೇವರ ಪ್ರತಿಷ್ಠೆ, ಶ್ರೀಗೋಪಾಲಕೃಷ್ಣ ದೇವರಿಗೆ ತತ್ಪಹೋಮ, ತತ್ಪಕಲಶಾಭಿಷೇಕ, ಬ್ರಹ್ಮಕಲಶ ಂಮಡಲ, ಬ್ರಹ್ಮರಥ ಸಮರ್ಪಣೆಯ ವೈದಿಕ ವಿಧಿವಿಧಾನಗಳು ಎಡಪದವು ನಾರಾಯಣ ತಂತ್ರಿಗಳ ನೇತೃತ್ವ ದೇವಳದ ಪ್ರಧಾನ ಅರ್ಚಕರಾದ ವೇ.ಮೂ.ಸುದರ್ಶನ್ ಬಲ್ಲಾಳ್ ಪೌರೋಹಿತ್ಯದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ‌ ಗೌರವಾಧ್ಯಕ್ಷ ಸತೀಶ್ ಭಂಡಾರಿ ಕುಳತ್ತಬೆಟ್ಟು, ಅಧ್ಯಕ್ಷ ರಾಕೇಶ್ ಮಲ್ಲಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ಸಜೀಪ ಮಾಗಣೆ ತಂತ್ರಿಗಳಾದ ಎಂ.ಸುಬ್ರಹ್ಮಣ್ಯ ಭಟ್, ಸಂಪತ್ ಕುಮಾರ್ ಶೆಟ್ಟಿ,ಸೀತಾರಾಮ ಸಾಲಿಯಾನ್ ಬೀದಿ, ಶ್ರೀ.ಕ್ಷೇ.ಧ.ಗ್ರಾ.ಯೋ.ಯ ಯೋಜನಾಧಿಕಾರಿ ಜಯಾನಂದ ಪಿ.,ಲೋಕನಾಥ ಶೆಟ್ಟಿ ಪಿ.ಸದಾನಂದ ಹಳೇಗೇಟು ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು