2:34 PM Friday6 - June 2025
ಬ್ರೇಕಿಂಗ್ ನ್ಯೂಸ್
Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ…

ಇತ್ತೀಚಿನ ಸುದ್ದಿ

ಕಾರ್ಕಳ: ಬೆಂಕಿ ಅನಾಹುತ; ಕಂಬಳ ಕೋಣ ಥೊನ್ಸೆ ಮತ್ತು ಅಪ್ಪು ಬಲಿ

31/05/2025, 19:15

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೇಲಾಡಿ ಬಾವ ಕೃಷಿಕ ಅಶೋಕ್ ಶೆಟ್ಟಿಯವರ ಕನಹಲಗೆಯ ಎರಡು ಹೆಸರಾಂತ ಕಂಬಳ ಕೋಣಗಳು – ಥೊನ್ಸೆ ಮತ್ತು ಅಪ್ಪು – ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಬೆಂಕಿಗೆ ಬಲಿಯಾಗಿವೆ.


ಈ ಕೋಣಗಳು ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಕಂಬಳಗಳಲ್ಲಿ ಭಾರಿ ಬಹುಮಾನಗಳನ್ನು ಗೆದ್ದಿದ್ದವು.
ಘಟನೆ ರಾತ್ರಿ ಸಂಭವಿಸಿದ್ದು, ಹತ್ತಿರವಿದ್ದ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಅದರ ಬಿಳವಣಿಗೆ ತಡೆಗಟ್ಟಲಾಗಲಿಲ್ಲ. ಹಟ್ಟಿಗೆ ಸೇರ್ಪಡೆಯಾಗಿ ಇದ್ದ ಭತ್ತದ ಬಣವೆಗೆ ಬೆಂಕಿ ಬಿದ್ದ ಕಾರಣ, ಉರಿಯುವ ವ್ಯಾಪ್ತಿ ಹೆಚ್ಚಾಗಿ ಕಟ್ಟಿಹಾಕಿದ್ದ ಕೋಣಗಳ ಸಹಿತವು ಬೆಂಕಿಗೆ ಆಹುತಿಯಾಗಿವೆ.
ಸ್ಥಳೀಯರ ಪ್ರಕಾರ, ಬೆಂಕಿಯ ತೀವ್ರತೆಯಿಂದಾಗಿ ಥೊನ್ಸೆ ಮತ್ತು ಅಪ್ಪು ಸ್ಥಳದಲ್ಲೇ ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ಕಂಬಳ ಕೋಣಗಳನ್ನು ಸಾಕಲು ಮಾಲೀಕರಾದ ಅಶೋಕ್ ಶೆಟ್ಟಿ ವರ್ಷಗಳಿಂದ ಶ್ರಮಪಟ್ಟು ಬೆಳೆಸಿದ್ದರು. ಈ ಕಣ್ಮಣಿಗಳ ಸಾವಿಗೆ ಹಳ್ಳಿ ಜನತೆಯಲ್ಲಿ ಆಘಾತ ಮತ್ತು ದುಃಖದ ಛಾಯೆ ಹರಡಿದೆ.
“ಥೊನ್ಸೆ ಮತ್ತು ಅಪ್ಪು ಮಾತ್ರ ಕೋಣಗಳು ಅಲ್ಲ. ಅವು ನಮ್ಮ ಕುಟುಂಬದ ಸದಸ್ಯರಂತಾಗಿದ್ದವು. ಇಂತಹದು ಆಗಲಿದೆ ಅಂತ ಕನಸೂ ಕಂಡಿರಲಿಲ್ಲ,” ಎಂದು ದುಃಖಭರಿತ ಕಂಠದಲ್ಲಿ ಮಾಲಿಕ ಅಶೋಕ್ ಶೆಟ್ಟಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು