8:49 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಅಹಲ್ಯಾಬಾಯಿ ಹೋಳ್ಕರ್ ಅಖಂಡ ರಾಷ್ಟ್ರ ತಪಸ್ವಿನಿ: ಲೇಖಕಿ ಮೇಘಾ ಪ್ರಮೋದ್

01/06/2025, 15:18

ಬೆಂಗಳೂರು(reporterkarnataka.com): ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ರಾಷ್ಟ್ರದ ಅಖಂಡತೆಯನ್ನು ನಿರ್ಮಿಸುವುದರಲ್ಲಿ ಪಾತ್ರವಹಿಸಿದ ಅಖಂಡ ರಾಷ್ಟ್ರ ತಪಸ್ವಿನಿ ಎಂದು ಲೇಖಕಿ ಮೇಘಾ ಪ್ರಮೋದ್ ಹೇಳಿದರು.
ಬಸವನಗುಡಿಯ ಅಬಲಾಶ್ರಮದಲ್ಲಿ ನಡೆದ ಮಂಥನ ಶಂಕರಪುರ ವತಿಯಿಂದ ‘ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್’ ಪುಸ್ತಕದ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರದ ಸಾಂಸ್ಕೃತಿಕ ಮತ್ತು ಧಾರ್ಮಿಕ ಪುನರುತ್ಥಾನಕ್ಕಾಗಿ ಮಹತ್ವದ ಕೊಡುಗೆ ನೀಡಿದ ಅಹಲ್ಯಾಬಾಯಿ ಹೋಳ್ಕರ್ ಅವರ ಕುರಿತು ನಮ್ಮ ಪಠ್ಯಪುಸ್ತಕಗಳು ಕಡೆಗಣಿಸಿವೆ. ಆದರೆ ರಾಷ್ಟ್ರದ ಸರ್ವಾಂಗೀಣ ಉನ್ನತಿಗಾಗಿ ಹಲವು ಮಜಲುಗಳಲ್ಲಿ ಕೊಡುಗೆ ನೀಡಿದ ದಕ್ಷ ಆಡಳಿತಗಾರ್ತಿ, ರಾಜನೀತಿತಜ್ಞೆ, ಲೋಕಮಾತೆ, ಪುಣ್ಯಶ್ಲೋಕಿ ಅಹಲ್ಯಾಬಾಯಿ ಹೋಳ್ಕರ್ ಎಂದರು.


ಅಹಲ್ಯಾ ಬಾಯಿ ಹೋಳ್ಕರ್ ಅವರ ಆಡಳಿತದ ಅವಧಿಯಲ್ಲಿ ಬ್ರಿಟಿಷರಾದಿಯಾಗಿ, ನಾಡಿನೊಳಗಿನ ಅನೇಕ ಮತಾಂಧರೂ ತಮ್ಮ ರಾಜಕೀಯ ಅಸ್ತಿತ್ವವನ್ನು ಪಡೆಯುವುದಕ್ಕೆ ಪ್ರಯತ್ನಿಸುತ್ತಿದ್ದರು.‌ ಆದರೆ ಚಾಣಾಕ್ಷ ಅಹಲ್ಯಾ ಬಾಯಿ ಹೋಳ್ಕರ್ ಅವರಿಗೆ ಶತ್ರುಬೋಧೆ ಬಹಳ ಚೆನ್ನಾಗಿತ್ತು. ಟಿಪ್ಪುವನ್ನು ನಂಬಿಕೆಗೆ ಅನರ್ಹನಾದ ವ್ಯಕ್ತಿ ಎಂದೂ, ಬ್ರಿಟಿಷರ ಕುತಂತ್ರದ ಬಗ್ಗೆ ಎಚ್ಚರಿಕೆ ವಹಿಸಬೇಕೆಂದೂ ತಿಳಿಸಿದ್ದರು ಎಂದು ನುಡಿದರು.
ಅಂದಿನ ಕಾಲದಲ್ಲೇ ಮಹಿಳೆಯರ ಉತ್ಕೃಷ್ಟ ಜೀವನಕ್ಕಾಗಿ ಬಾಲ್ಯ ವಿವಾಹ ರದ್ಧತಿ, ಮಹಿಳಾ ಸೇನೆ ಮತ್ತು ಅದರಲ್ಲಿ ವಿಧವೆಯರ ಸಹಭಾಗಿತ್ವ, ಗುಡಿ ಕೈಗಾರಿಕೆಗಳಿಗೆ ಮಹತ್ವ, ಮಾಹೇಶ್ವರಿ ಸೀರೆಗಳ ತಯಾರಿಕೆ ಮುಂತಾದವುಗಳಿಗೆ ಪ್ರೋತ್ಸಾಹ ನೀಡಿದರು ಎಂದು ಅಭಿಪ್ರಾಯಪಟ್ಟರು.
ರಾಷ್ಟ್ರದ ಉದ್ದಗಲಕ್ಕೂ ಅನೇಕ ತೀರ್ಥಕ್ಷೇತ್ರಗಳ ನಿರ್ಮಾಣ, ಪುನರುಜ್ಜೀವನ, ಗಂಗಾಜಲ ವಿತರಣೆ, ಸ್ವಾವಲಂಬಿ ಆರ್ಥಿಕತೆಗೆ ಒತ್ತು ನೀಡಿ ಎಲ್ಲಾ ಸೇವಾಕಾರ್ಯಗಳಿಗೆ ರಾಜ್ಯದ ಬೊಕ್ಕಸದ ಹಣವನ್ನು ಬಳಸದೆ ಸ್ವಂತದ್ದೇ ಹಣ ಬಳಸಿ ಅಹಲ್ಯಾಬಾಯಿ ಹೋಳ್ಕರ್ ಎಲ್ಲಾ ತಲೆಮಾರುಗಳಿಗೂ ಮಾದರಿಯಾಗಿದ್ದಾರೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು