6:36 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಅಹಲ್ಯಾಬಾಯಿ ಹೋಳ್ಕರ್ ಅಖಂಡ ರಾಷ್ಟ್ರ ತಪಸ್ವಿನಿ: ಲೇಖಕಿ ಮೇಘಾ ಪ್ರಮೋದ್

01/06/2025, 15:18

ಬೆಂಗಳೂರು(reporterkarnataka.com): ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ರಾಷ್ಟ್ರದ ಅಖಂಡತೆಯನ್ನು ನಿರ್ಮಿಸುವುದರಲ್ಲಿ ಪಾತ್ರವಹಿಸಿದ ಅಖಂಡ ರಾಷ್ಟ್ರ ತಪಸ್ವಿನಿ ಎಂದು ಲೇಖಕಿ ಮೇಘಾ ಪ್ರಮೋದ್ ಹೇಳಿದರು.
ಬಸವನಗುಡಿಯ ಅಬಲಾಶ್ರಮದಲ್ಲಿ ನಡೆದ ಮಂಥನ ಶಂಕರಪುರ ವತಿಯಿಂದ ‘ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್’ ಪುಸ್ತಕದ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರದ ಸಾಂಸ್ಕೃತಿಕ ಮತ್ತು ಧಾರ್ಮಿಕ ಪುನರುತ್ಥಾನಕ್ಕಾಗಿ ಮಹತ್ವದ ಕೊಡುಗೆ ನೀಡಿದ ಅಹಲ್ಯಾಬಾಯಿ ಹೋಳ್ಕರ್ ಅವರ ಕುರಿತು ನಮ್ಮ ಪಠ್ಯಪುಸ್ತಕಗಳು ಕಡೆಗಣಿಸಿವೆ. ಆದರೆ ರಾಷ್ಟ್ರದ ಸರ್ವಾಂಗೀಣ ಉನ್ನತಿಗಾಗಿ ಹಲವು ಮಜಲುಗಳಲ್ಲಿ ಕೊಡುಗೆ ನೀಡಿದ ದಕ್ಷ ಆಡಳಿತಗಾರ್ತಿ, ರಾಜನೀತಿತಜ್ಞೆ, ಲೋಕಮಾತೆ, ಪುಣ್ಯಶ್ಲೋಕಿ ಅಹಲ್ಯಾಬಾಯಿ ಹೋಳ್ಕರ್ ಎಂದರು.


ಅಹಲ್ಯಾ ಬಾಯಿ ಹೋಳ್ಕರ್ ಅವರ ಆಡಳಿತದ ಅವಧಿಯಲ್ಲಿ ಬ್ರಿಟಿಷರಾದಿಯಾಗಿ, ನಾಡಿನೊಳಗಿನ ಅನೇಕ ಮತಾಂಧರೂ ತಮ್ಮ ರಾಜಕೀಯ ಅಸ್ತಿತ್ವವನ್ನು ಪಡೆಯುವುದಕ್ಕೆ ಪ್ರಯತ್ನಿಸುತ್ತಿದ್ದರು.‌ ಆದರೆ ಚಾಣಾಕ್ಷ ಅಹಲ್ಯಾ ಬಾಯಿ ಹೋಳ್ಕರ್ ಅವರಿಗೆ ಶತ್ರುಬೋಧೆ ಬಹಳ ಚೆನ್ನಾಗಿತ್ತು. ಟಿಪ್ಪುವನ್ನು ನಂಬಿಕೆಗೆ ಅನರ್ಹನಾದ ವ್ಯಕ್ತಿ ಎಂದೂ, ಬ್ರಿಟಿಷರ ಕುತಂತ್ರದ ಬಗ್ಗೆ ಎಚ್ಚರಿಕೆ ವಹಿಸಬೇಕೆಂದೂ ತಿಳಿಸಿದ್ದರು ಎಂದು ನುಡಿದರು.
ಅಂದಿನ ಕಾಲದಲ್ಲೇ ಮಹಿಳೆಯರ ಉತ್ಕೃಷ್ಟ ಜೀವನಕ್ಕಾಗಿ ಬಾಲ್ಯ ವಿವಾಹ ರದ್ಧತಿ, ಮಹಿಳಾ ಸೇನೆ ಮತ್ತು ಅದರಲ್ಲಿ ವಿಧವೆಯರ ಸಹಭಾಗಿತ್ವ, ಗುಡಿ ಕೈಗಾರಿಕೆಗಳಿಗೆ ಮಹತ್ವ, ಮಾಹೇಶ್ವರಿ ಸೀರೆಗಳ ತಯಾರಿಕೆ ಮುಂತಾದವುಗಳಿಗೆ ಪ್ರೋತ್ಸಾಹ ನೀಡಿದರು ಎಂದು ಅಭಿಪ್ರಾಯಪಟ್ಟರು.
ರಾಷ್ಟ್ರದ ಉದ್ದಗಲಕ್ಕೂ ಅನೇಕ ತೀರ್ಥಕ್ಷೇತ್ರಗಳ ನಿರ್ಮಾಣ, ಪುನರುಜ್ಜೀವನ, ಗಂಗಾಜಲ ವಿತರಣೆ, ಸ್ವಾವಲಂಬಿ ಆರ್ಥಿಕತೆಗೆ ಒತ್ತು ನೀಡಿ ಎಲ್ಲಾ ಸೇವಾಕಾರ್ಯಗಳಿಗೆ ರಾಜ್ಯದ ಬೊಕ್ಕಸದ ಹಣವನ್ನು ಬಳಸದೆ ಸ್ವಂತದ್ದೇ ಹಣ ಬಳಸಿ ಅಹಲ್ಯಾಬಾಯಿ ಹೋಳ್ಕರ್ ಎಲ್ಲಾ ತಲೆಮಾರುಗಳಿಗೂ ಮಾದರಿಯಾಗಿದ್ದಾರೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು