12:30 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

Karnataka | ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ವಿಷಾದ

03/06/2025, 19:29

ಗದಗ(reporterkarnataka.com): ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು.
ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯ ಎಂದರು.
ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿದವರಿಗೆ ಕೊಟ್ಟಿರುವ ಮಂತ್ರ. ಆದರೆ, ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಅವರು ನುಡಿದರು.


ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ‌ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ . ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ‌ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ‌ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು. ಶಿಕ್ಷಣ ದೊರಕದಿದ್ದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವೇ ಇಲ್ಲ. ನನಗೆ ರಾಜಪ್ಪ ಎನ್ನುವ ಶಿಕ್ಷಕರು ಸಿಗದೇ ಹೋಗಿದ್ದರೆ ನನಗೆ ಶಿಕ್ಷಣವೂ ಸಿಗುತ್ತಿರಲಿಲ್ಲ, ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹಸು ಕಾಯ್ಕೊಂಡು ಇರಬೇಕಾಗಿತ್ತು ಎಂದರು.
ಅದಕ್ಕೇ ನಮ್ಮ ಸರ್ಕಾರ ಶಿಕ್ಷಣ-ಆರೋಗ್ಯ-ಅನ್ನಕ್ಕೆ ಪ್ರಮುಖ ಆಧ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು