3:59 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

New Delhi | ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

04/06/2025, 22:02

ನವದೆಹಲಿ(reporterkarnataka.com): ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದ್ದಾರೆ.
ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು