7:17 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ

05/06/2025, 13:08

ಮಂಡ್ಯ/ ಬೀದರ್ (reporterkarnataka.com): ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಜನ ಮೃತಪಟ್ಟಿದ್ದು ದುರದೃಷ್ಟಕರ, ಮೃತರ ಕುಟುಂಬಗಳಿಗೆ ಆರ್ ಸಿಬಿ ತಂಡ ಕೂಡ ಪರಿಹಾರ ಕೊಡಬೇಕು ಎಂದು ಶಾಸಕರಾದ ಮಂಡ್ಯದ ದಿನೇಶ ಗೂಳಿಗೌಡ ಹಾಗೂ ಬೀದರ್ ನ ಭೀಮರಾವ್ ಪಾಟೀಲ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಐಪಿಎಲ್ ಫೈನಲ್ ನಲ್ಲಿ ವಿಜಯಿಯಾಗಿರುವ ಆರ್ ಸಿಬಿ ತಂಡವನ್ನು ನೋಡಲು, ಅವರನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮಂಗಳವಾರ ರಾತ್ರಿಯೇ ರಾಜ್ಯದ ಮೂಲೆ, ಮೂಲೆಗಳಿಂದ ಬೆಂಗಳೂರಿಗೆ ಬಂದಿದ್ದರು.
ಬುಧವಾರ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದಾರೆ. ಆರ್ ಸಿಬಿ ಕೋಟ್ಯಂತರ‌ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದೆ. ಐಪಿಎಲ್ ಗೆಲುವಿನಿಂದ ಕೋಟ್ಯಾಂತರ ಹಣ ಗಳಿಸಿದೆ. ಅಭಿಮಾನಿವಳ ರಕ್ಷಣೆ ಅವರದ್ದೂ ಜವಾಬ್ದಾರಿ. ಆದರೆ ಆರ್ ಸಿಬಿಯಾಗಲಿ ಅಥವಾ ಕೆಸಿಎ ಆಗಲಿ ಯಾವುದೇ ಪರಿಹಾರ ಘೋಷಿಸಿಲ್ಲ.‌
ಇಂಥ ದುರಂತದ‌ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಶಾಸಕದ್ವಯರು ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು