7:05 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಆಲಮಟ್ಟಿ ಎತ್ತರ; ಮಹಾರಾಷ್ಟ್ರ ಸಿಎಂ ತಕರಾರು ರಾಜಕೀಯ ಪ್ರೇರಿತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

05/06/2025, 18:47

ಬೆಂಗಳೂರು(reporterkarnataka.com): ಮಹಾರಾಷ್ಟ್ರ ಸಿಎಂ ಆಲಮಟ್ಟಿ ಜಲಾಶಯದ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ಆಲಮಟ್ಟಿ ಸಂಪೂರ್ಣ ಕೃಷ್ಣಾ ಜಲಾನಯನ ಪ್ರದೇಶದ ಒಂದು ಪ್ರಮುಖ ನೀರು ಸಂಗ್ರಹ ಮತ್ತು ವಿತರಣೆಯ ವಾಟರ್ ಗ್ರಿಡ್ ಆಗಿದೆ. ಉತ್ತರ ಕರ್ನಾಟಕದ ಜೀವನದಿಗೆ ಹೃದಯ ಭಾಗವಾಗಿದೆ. ಆಲಮಟ್ಟಿ ಎತ್ತರದ ಬಗ್ಗೆ ಕರ್ನಾಟಕದ ಮೂಲ ಕೃಷ್ಣಾ ಜಲಾನಯನ ಯೋಜನೆಯಲ್ಲಿ ಅಳವಡಿಸಿದೆ. ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ಕೊಟ್ಟಿದೆ. ಅದರ ಪ್ರಕಾರ 524.25 ಮೀಟರ್ ಎಂಬುದು ಮೂಲ ಯೋಜನೆಯಲ್ಲಿ ಇದ್ದು ತದ ನಂತರ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ತಕರಾರು ಆದಮೇಲೆ ಕೆಡಬ್ಲುಟಿ 1 ನೀರನ್ನು ಉಪಯೋಗ ಮಾಡಲು 519.6 ಮೀಟರ್ ಗೆ ಸೀಮಿತಗೊಳಿಸಿ ಉಪಯೋಗಿಸಲು ಸುಪ್ರೀಂ ಕೂಡ ಒಪ್ಪಿದೆ. ಸ್ಕಿಂ ಬಿ.ಯಲ್ಲಿ ಕೆಡಬ್ಲುಡಿಟಿ 2 ( ಕೃಷ್ಣಾ ವಾಟರ್ ಡಿಸ್ಪ್ಯೂಟ್ ಟ್ರಿಬ್ಯುನಲ್ 2) ನಲ್ಲಿ ನಮಗೆ ನೀರು ಹಂಚಿಕೆಯಾಗಿರುವ 173 ಟಿಎಂಸಿಯನ್ನು 519 ರಿಂದ 524 ರಲ್ಲಿ ಪಡೆದುಕೊಳ್ಳಬಹುದೆಂದು ಕೆಡಬ್ಲುಡಿಟಿ 2 ಅಂತಿಮ ಟ್ರಿಬ್ಯುನಲ್ ಆದೇಶದಲ್ಲಿದೆ ಎಂದು ತಿಳಿಸಿದ್ದಾರೆ.
ಕೆಡಬ್ಲ್ಯುಡಿ ಟ್ರಿಬ್ಯುನಲ್ ಸ್ವತಂತ್ರವಾಗಿ ಹೈಡ್ರಾಲಾಜಿಕಲ್ ಸ್ಟಡಿ ಮಾಡಿಸಿ 524 ಮೀಟರ್ ಗೆ ಏರಿಸಿದರೂ ಕೂಡ ಕೊಲ್ಲಾಪುರ ಸಾಂಗ್ಲಿ ಅಷ್ಟೇ ಅಲ್ಲದೆ ಮಹಾರಾಷ್ಟ್ರದ ಯಾವುದೇ ಭಾಗ ಮುಳುಗಡೆಯಾವುದಿಲ್ಲ ಎಂದು ಅಂತಿಮವಾಗಿ ಟ್ರಿಬ್ಯುನಲ್ ತೀರ್ಪು ಕೊಟ್ಟಾಗಿದೆ. ಇದನ್ನು ಮಹಾರಾಷ್ಟ್ರ ಎಲ್ಲಿಯೂ ಕೂಡ ಕಾನೂನಾತ್ಮಕವಾಗಿ ಪ್ರಶ್ನಿಸಿಲ್ಲ. ಅಲ್ಲದೇ ಕೆಡಬ್ಲುಡಿಟಿ 2 ನೊಟಿಫಿಕೇಶನ್ ಮಾಡಬೇಕೆಂದು ಕರ್ನಾಟಕಕ್ಕಿಂತ ಮೊದಲೇ ಸುಪ್ರೀಂ ಕೊರ್ಟ್ ಗೆ ಮಹಾರಾಷ್ಟ್ರ ಹೋಗಿದೆ. ಅಲ್ಲದೆ 2005 ರಲ್ಲಿ ಪ್ರವಾಹ ಆದಾಗ ಅದು ಆಲಮಟ್ಟಿ ಹಿನ್ನೀರಿನಿಂದ ಆಗಿಲ್ಲ ಎಂದು ಅವತ್ತಿನ ಕೇಂದ್ರ ಜಲ ಆಯೋಗ ಕೂಡ ತೀರ್ಪು ನೀಡಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆಲಮಟ್ಟಿ ಡ್ಯಾಂ ನಿರ್ಮಾಣ ಆಗುವ ಮುಂಚೆಯೇ 1960-70 ರ ದಶಕದಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಸಾಂಗ್ಲಿಯಲ್ಲಿ ಪ್ರವಾಹ ಆಗಿರುವುದು ಗಮನಾರ್ಹ ಎಂದು ತಿಳಿಸಿದ್ದಾರೆ.
ಇಷ್ಟೆಲ್ಲಾ ಪ್ರಕ್ರಿಯೆ ಆದ ಮೇಲೆ ಈಗ ಮತ್ತೆ ಆಲಮಟ್ಟಿ ಎತ್ತರದ ಬಗ್ಗೆ ಮಹಾರಾಷ್ಟ್ರ ಸಿಎಂ ತಕರಾರು ತೆಗೆದಿರುವುದು ಅಸಮಂಜಸ ಮತ್ತು ಅಲ್ಲಿಯ ಎರಡು ಜಿಲ್ಲೆಯ ರಾಜಕೀಯ ಒತ್ತಡಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಈ ನಿಲುವು ತೆಗೆದುಕೊಳ್ಳಲು ಸಾದ್ಯವಿದೆ‌. ಹೀಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಂಪೂರ್ಣ ಸತ್ಯವನ್ನು ತಿಳಿಸಬೇಕು. ಅಲ್ಲದೆ ರಾಜ್ಯ ಸರ್ಕಾರ ಪುನರ್ ವಸತಿ ಮತ್ತು ಪುನರ್ ನಿರ್ಮಾಣ (ಆರ್ ಆಂಡ್ ಆರ್) ಕೆಲಸ ತ್ವರಿತಗತಿಯಲ್ಲಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ 173 ಟಿಎಂಸಿ ನಮ್ಮ ನೀರಿನ ಹಕ್ಕನ್ನು ನಾವೇ ಗಂಡಾಂತರಕ್ಕೆ ನೂಕಿದಂತೆ ಆಗುತ್ತದೆ‌. ಈ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಬೆರೆಸದೆ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲ ಕೇಂದ್ರ ಸರ್ಕಾರವೂ ಕೂಡ ನಡೆದಿರುವ ಎಲ್ಲ ಘಟನಾವಳಿಗಳನ್ನು, ಆದೇಶಗಳನ್ನು ಪರಿಸಿಲಿಸಿ ಕರ್ನಾಟಕದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು