6:46 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪುತ್ತೂರು ನಗರ ಸಭೆ ಬಿಜೆಪಿ ಸದಸ್ಯ ನಾಪತ್ತೆ: ಬೈಕ್, ಮೊಬೈಲ್, ಚಪ್ಪಲಿ ಪಾಣೆಮಂಗಳೂರು ನೇತ್ರಾವತಿ ನದಿ ಬದಿ ಪತ್ತೆ

05/06/2025, 19:16

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಪುತ್ತೂರು ಬಿಜೆಪಿ ನಗರ ಸಭೆ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರು ನಾಪತ್ತೆಯಾಗಿದ್ದು, ಅವರದ್ದು ಎನ್ನಲಾದ ಬೈಕ್, ಚಪ್ಪಲಿ ಮತ್ತು ಮೊಬೈಲ್ ಫೋನ್ ಪಾಣೆಮಂಗಳೂರು
ನೇತ್ರಾವತಿ ನದಿ ಬದಿ ಪತ್ತೆಯಾಗಿದೆ.
ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದಾರೆ.
ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ ನಂಬರ್ ಪಡೆದು ಕರೆ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದು ಎಂದು ತಿಳಿದಿದ್ದು,ಮನೆಯವರಿಗೆ ತಿಳಿಸಲಾಗಿದೆ. ಸ್ಥಳದಲ್ಲಿ ರಮೇಶ್ ರೈ ಅವರ ಕುಟುಂಬದ ಸದಸ್ಯರು ಪೋಲೀಸರು ಹಾಗೂ ಸ್ಥಳೀಯರು ಜಮಾಯಿಸಿದ್ದು ಸುತ್ತ ಮುತ್ತಲಿನ ಜಾಗದಲ್ಲಿ ಹುಡುಕಲು ಪ್ರಾರಂಭಿಸಿದ್ದಾರೆ.
ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಯ್ಕೆಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು