9:51 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಾಪತ್ತೆಯಾಗಿದ್ದ ಪುತ್ತೂರು ನಗರಸಭೆ ಬಿಜೆಪಿ ಸದಸ್ಯನ ಶವ ಪತ್ತೆ: ನೇತ್ರಾವತಿ ದಂಡೆಯ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ

06/06/2025, 15:53

ಬಂಟ್ವಾಳ(reporterkarnataka.com): ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ನೇತ್ರಾವತಿ ನದಿ ದಂಡೆಯ ನೀರಿನ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪುತ್ತೂರು ನಗರಸಭೆ ಬಿಜೆಪಿ ಸದ್ಯರಾಗಿದ್ದ ರಮೇಶ್ ರೈ ಅವರು ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಶರ್ಟ್, ಚಪ್ಪಲಿ ಹಾಗೂ ಮೊಬೈಲ್ ಫೋನ್ ಪಾಣಿಮಂಗಳೂರು ಬಳಿಯ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಇದೀಗ ನದಿ ದಂಡೆಯಲ್ಲಿರುವ ನೀರಿನ ಟ್ಯಾಂಕ್ ನಲ್ಲಿ ರಮೇಶ್ ರೈ ಅವರ ಮೃತದೇಹ ದೊರೆತಿದೆ. ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಶವವನ್ನು ಮೇಲಕ್ಕೆತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು