9:27 PM Friday6 - June 2025
ಬ್ರೇಕಿಂಗ್ ನ್ಯೂಸ್
Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ…

ಇತ್ತೀಚಿನ ಸುದ್ದಿ

Mangaluru | ಮಂಗಳೂರು ಕುಡಿಯುವ ನೀರಿನ ಸಮಸ್ಯೆ: ಪಾಲಿಕೆ ಆಯುಕ್ತರ ಜತೆ ಶಾಸಕ ವೇದವ್ಯಾಸ ಕಾಮತ್ ತುರ್ತುಸಭೆ

06/06/2025, 18:01

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ತುರ್ತು ಸಭೆ ನಡೆಸಿದರು.


ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ವಿಪರೀತ ಮಳೆ ಸುರಿದಿದ್ದರೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪಿಲ್ಲ. ಇನ್ನೊಂದೆಡೆ ರಾಜಕಾಲುವೆಗಳಲ್ಲಿ ಸಮರ್ಪಕವಾಗಿ ಹೂಳೆತ್ತದಿರುವಿಕೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಸಾಲದ್ದಕ್ಕೆ ಮಳೆಯಿಂದ ತೊಂದರೆಗೀಡಾದವರಿಗೆ ಪಾಲಿಕೆ ವತಿಯಿಂದ ಯಾವುದೇ ನೆರವು ಸಿಗುತ್ತಿಲ್ಲ. ಕಸ ವಿಲೇವಾರಿಯ ಅವ್ಯವಸ್ಥೆಯ ಬಗ್ಗೆಯೂ ಜನರಿಂದ ದೂರುಗಳು ಬರುತ್ತಿವೆ. ಬಲ್ಲಾಳ್ ಬಾಗ್ ಬಳಿಯ ಶಿಥಿಲಗೊಂಡಿರುವ ರಾಜಕಾಲುವೆಯ ಬ್ರಿಡ್ಜ್ ನಿಂದ ನೀರು ಸಾರಾಗವಾಗಿ ಹರಿಯದೇ ಅದರಿಂದಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದು ಆ ಬಗ್ಗೆಯೂ ಕ್ರಮಕೈಗೊಳ್ಳುವುದು ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಪಾಲಿಕೆ ಅಧಿಕಾರಿಗಳು ಯಾವುದನ್ನೂ ಹಗುರವಾಗಿ ಪರಿಗಣಿಸದೇ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕಾರ್ಯಪಾಲಕ ಎಂಜಿನಿಯರ್ ನರೇಶ್ ಶೆಣೈ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು