1:12 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ 4 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಹೆಸರು ಪ್ರಕಟ: ದಿನೇಶ್ ಅಮೀನ್ ಮಟ್ಟು, ಆರತಿಕೃಷ್ಣ, ಡಿ.ಜಿ. ಸಾಗರ್, ರಮೇಶ್ ಬಾಬುಗೆ ಅವಕಾಶ

06/06/2025, 21:25

ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಲ್ಲಿ ತೆರವಾಗಿರುವ 4 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಎನ್ ಆರ್ ಐ ಮಾಜಿ ಉಪಾಧ್ಯಕ್ಷೆ ಆರತಿಕೃಷ್ಣ, ದಲಿತ ಸಂಘರ್ಷ ಸಮಿತಿಯ ಡಿ.ಜಿ. ಸಾಗರ್ ಹಾಗೂ ಮಾಜಿ ಎಂಎಲ್ ಸಿ ರಮೇಶ್ ಬಾಬು ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ದಿನೇಶ್ ಅಮೀನ್ ಮಟ್ಟು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭ್ಯರ್ಥಿಯಾದರೆ, ಆರತಿಕೃಷ್ಣ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಭ್ಯರ್ಥಿ. ಉಳಿದ ಡಿ.ಜಿ. ಸಾಗರ್ ಹಾಗೂ ರಮೇಶ್ ಬಾಬು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಭ್ಯರ್ಥಿಯಾಗಿದ್ದಾರೆ. ತೆರವಾಗಿರುವ 4 ಎಂಎಲ್ ಸಿ ಸ್ಥಾನಕ್ಕಾಗಿ ಕಾಂಗ್ರೆಸ್ ನೊಳಗೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸುಮಾರು ಎರಡು ಡಜನಿಗೂ ಅಧಿಕ ಅಕಾಂಕ್ಷಿಗಳು ಈ ಸ್ಥಾನಕ್ಕಾಗಿ ಟೆವಲ್ ಹಾಸಿದ್ದರು.
ಕಾಂಗ್ರೆಸ್ ನ ಹಿರಿಯ ನಾಯಕರಾದ ಬಿ.ಎಲ್. ಶಂಕರ್, ವಿ. ಸುದರ್ಶನ್ ಅವರ ಹೆಸರು ಕೂಡ ಕೇಳಿ ಬರುತ್ತಿತ್ರು. ಆದರೆ, ಅಂತಿಮವಾಗಿ ಈ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ದಿನೇಶ್ ಅಮೀನ್ ಮಟ್ಟು ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ದುಡಿದು ಸಾಕಷ್ಟು ಹೆಸರು ಪಡೆದವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು. ಮಾಜಿ ಸಚಿವರ ಪುತ್ರಿಯಾದ ಆರತಿಕೃಷ್ಣ ಅವರು ಎನ್ ಆರ್ ಐಯಲ್ಲಿ ಸಾಕಷ್ಟು ಕೆಲಸ ಮಾಡಿದವರು. ಡಿ.ಜಿ. ಸಾಗರ್ ಅವರು ದಸಂಸದಲ್ಲಿ ಕೆಲಸ ಮಾಡಿದವರು. ಹಾಗೆ ರಮೇಶ್ ಬಾಬು ಅವರು ಮಾಜಿ ಎಂಎಲ್ ಸಿಯಾಗಿ ಅನುಭವ ಹೊಂದಿದವರು.

ಇತ್ತೀಚಿನ ಸುದ್ದಿ

ಜಾಹೀರಾತು