7:20 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

08/06/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರಗಳಿದ್ದಾಗ ಬಹಳಷ್ಟು ಘಟನೆ ನಡೆದಿದೆ, ನಾವು ರಾಜೀನಾಮೆ ಕೇಳಿರಲಿಲ್ಲ. ಪಾಕಿಸ್ತಾನದ ಜೊತೆ ಯುದ್ಧವಾದಾಗ ಎಲ್ಲ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದ್ರು. ಅಲ್ಲೂ ಫೆಯ್ಲ್ಯೂರ್ ಆಗಿತ್ತು, ಆಗ ಯಾರೂ ರಾಜೀನಾಮೆ ಕೇಳಿಲ್ಲ.
ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆಯಿಂದ ಹೊರಬರಬೇಕು. ಯಾರು ಅನುಮತಿ ಕೇಳಿದ್ರು, ಯಾರು ನಿರಾಕರಿಸಿದ್ರು, ಯಾವಾಗ ಕೊಟ್ರು ಯಾರಿಗೂ ಗೊತ್ತಿಲ್ಲ, ಎಲ್ಲಾ ಬೂದಿ ಮುಚ್ಚಿದ ಕೆಂಡ ಎಂದು ಸಚಿವ ಜಾರಕಿಹೊಳಿ ನುಡಿದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಒಬ್ಬೊಬ್ಬರ ಲೆವೆಲ್ ನಲ್ಲಿ ಒಂದೊಂದು ಆಗಿದೆ ತನಿಖೆಯಿಂದ ಸತ್ಯ ಹೊರಬರಲಿ. ಹೈಕಮಾಂಡ್ ಜವಾಬ್ದಾರಿ ಇದೆ, ದೆಹಲಿಗೆ ಕರೆಸಿ ವರದಿ ಕೇಳಬಹುದು, ಮುಂದೆ ಆಗದಂತೆ ಎಚ್ಚರ ವಹಿಸಲು ಸಲಹೆ ಸೂಚನೆ ಕೊಡಬಹುದು ಎಂದರು.
ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ, ಆಮೇಲೆ ಮಾಡಬಹುದು, ಮಾಡೋ ವಿಚಾರ ಇದೆ, ಸದ್ಯಕ್ಕಿಲ್ಲ ಎಂದು ಅವರು ನುಡಿದರು.

*ಸಿಎಂ ಬದಲಾವಣೆ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ:*
ಅದೇಗೆ ಬದಲಾವಣೆ ಮಾಡ್ತಾರೆ? ನಿಮಗೆ ಹೇಳಿದ್ದು ಯಾರು? ಎಂದು ಸಚಿವರು ನಸುನಕ್ಕರು.
ಎರಡೂವರೆ ವರ್ಷಕ್ಕೆ ಮಾಡ್ತಾರೆ ಅಂತ ನಿಮಗೆ ಯಾರು ಹೇಳಿದ್ದು?
ಎರಡೂವರೆ ವರ್ಷ ಅಂತ ಎಲ್ಲೂ ಇಲ್ಲ, ಅವರೇ ಇದ್ದಾರೆ ಮುಂದೆಯೂ ಇರುತ್ತಾರೆ ಅಷ್ಟೇ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು