10:10 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

08/06/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರಗಳಿದ್ದಾಗ ಬಹಳಷ್ಟು ಘಟನೆ ನಡೆದಿದೆ, ನಾವು ರಾಜೀನಾಮೆ ಕೇಳಿರಲಿಲ್ಲ. ಪಾಕಿಸ್ತಾನದ ಜೊತೆ ಯುದ್ಧವಾದಾಗ ಎಲ್ಲ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದ್ರು. ಅಲ್ಲೂ ಫೆಯ್ಲ್ಯೂರ್ ಆಗಿತ್ತು, ಆಗ ಯಾರೂ ರಾಜೀನಾಮೆ ಕೇಳಿಲ್ಲ.
ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆಯಿಂದ ಹೊರಬರಬೇಕು. ಯಾರು ಅನುಮತಿ ಕೇಳಿದ್ರು, ಯಾರು ನಿರಾಕರಿಸಿದ್ರು, ಯಾವಾಗ ಕೊಟ್ರು ಯಾರಿಗೂ ಗೊತ್ತಿಲ್ಲ, ಎಲ್ಲಾ ಬೂದಿ ಮುಚ್ಚಿದ ಕೆಂಡ ಎಂದು ಸಚಿವ ಜಾರಕಿಹೊಳಿ ನುಡಿದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಒಬ್ಬೊಬ್ಬರ ಲೆವೆಲ್ ನಲ್ಲಿ ಒಂದೊಂದು ಆಗಿದೆ ತನಿಖೆಯಿಂದ ಸತ್ಯ ಹೊರಬರಲಿ. ಹೈಕಮಾಂಡ್ ಜವಾಬ್ದಾರಿ ಇದೆ, ದೆಹಲಿಗೆ ಕರೆಸಿ ವರದಿ ಕೇಳಬಹುದು, ಮುಂದೆ ಆಗದಂತೆ ಎಚ್ಚರ ವಹಿಸಲು ಸಲಹೆ ಸೂಚನೆ ಕೊಡಬಹುದು ಎಂದರು.
ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ, ಆಮೇಲೆ ಮಾಡಬಹುದು, ಮಾಡೋ ವಿಚಾರ ಇದೆ, ಸದ್ಯಕ್ಕಿಲ್ಲ ಎಂದು ಅವರು ನುಡಿದರು.

*ಸಿಎಂ ಬದಲಾವಣೆ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ:*
ಅದೇಗೆ ಬದಲಾವಣೆ ಮಾಡ್ತಾರೆ? ನಿಮಗೆ ಹೇಳಿದ್ದು ಯಾರು? ಎಂದು ಸಚಿವರು ನಸುನಕ್ಕರು.
ಎರಡೂವರೆ ವರ್ಷಕ್ಕೆ ಮಾಡ್ತಾರೆ ಅಂತ ನಿಮಗೆ ಯಾರು ಹೇಳಿದ್ದು?
ಎರಡೂವರೆ ವರ್ಷ ಅಂತ ಎಲ್ಲೂ ಇಲ್ಲ, ಅವರೇ ಇದ್ದಾರೆ ಮುಂದೆಯೂ ಇರುತ್ತಾರೆ ಅಷ್ಟೇ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು