9:01 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

08/06/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರಗಳಿದ್ದಾಗ ಬಹಳಷ್ಟು ಘಟನೆ ನಡೆದಿದೆ, ನಾವು ರಾಜೀನಾಮೆ ಕೇಳಿರಲಿಲ್ಲ. ಪಾಕಿಸ್ತಾನದ ಜೊತೆ ಯುದ್ಧವಾದಾಗ ಎಲ್ಲ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದ್ರು. ಅಲ್ಲೂ ಫೆಯ್ಲ್ಯೂರ್ ಆಗಿತ್ತು, ಆಗ ಯಾರೂ ರಾಜೀನಾಮೆ ಕೇಳಿಲ್ಲ.
ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆಯಿಂದ ಹೊರಬರಬೇಕು. ಯಾರು ಅನುಮತಿ ಕೇಳಿದ್ರು, ಯಾರು ನಿರಾಕರಿಸಿದ್ರು, ಯಾವಾಗ ಕೊಟ್ರು ಯಾರಿಗೂ ಗೊತ್ತಿಲ್ಲ, ಎಲ್ಲಾ ಬೂದಿ ಮುಚ್ಚಿದ ಕೆಂಡ ಎಂದು ಸಚಿವ ಜಾರಕಿಹೊಳಿ ನುಡಿದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಒಬ್ಬೊಬ್ಬರ ಲೆವೆಲ್ ನಲ್ಲಿ ಒಂದೊಂದು ಆಗಿದೆ ತನಿಖೆಯಿಂದ ಸತ್ಯ ಹೊರಬರಲಿ. ಹೈಕಮಾಂಡ್ ಜವಾಬ್ದಾರಿ ಇದೆ, ದೆಹಲಿಗೆ ಕರೆಸಿ ವರದಿ ಕೇಳಬಹುದು, ಮುಂದೆ ಆಗದಂತೆ ಎಚ್ಚರ ವಹಿಸಲು ಸಲಹೆ ಸೂಚನೆ ಕೊಡಬಹುದು ಎಂದರು.
ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ, ಆಮೇಲೆ ಮಾಡಬಹುದು, ಮಾಡೋ ವಿಚಾರ ಇದೆ, ಸದ್ಯಕ್ಕಿಲ್ಲ ಎಂದು ಅವರು ನುಡಿದರು.

*ಸಿಎಂ ಬದಲಾವಣೆ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ:*
ಅದೇಗೆ ಬದಲಾವಣೆ ಮಾಡ್ತಾರೆ? ನಿಮಗೆ ಹೇಳಿದ್ದು ಯಾರು? ಎಂದು ಸಚಿವರು ನಸುನಕ್ಕರು.
ಎರಡೂವರೆ ವರ್ಷಕ್ಕೆ ಮಾಡ್ತಾರೆ ಅಂತ ನಿಮಗೆ ಯಾರು ಹೇಳಿದ್ದು?
ಎರಡೂವರೆ ವರ್ಷ ಅಂತ ಎಲ್ಲೂ ಇಲ್ಲ, ಅವರೇ ಇದ್ದಾರೆ ಮುಂದೆಯೂ ಇರುತ್ತಾರೆ ಅಷ್ಟೇ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು